ಬೆಂಗಳೂರು : ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣ ಹೆಚ್ಚಾಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಬಾಲ ತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಿಎಂ ಸಭೆಯಲ್ಲಿ ಗರಂ ಆದರು.

2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬಾಲ್ಯವಿವಾಹ, ಬಾಲ ಗರ್ಭಿಣಿಯರ ಪ್ರಕರಣ ತಡೆಗಟ್ಟಿ ಎಂದು ಸೂಚನೆ ನೀಡಿದರು.  ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಸಿಎಂ ಖಡಕ್ ಸೂಚನೆ ನೀಡಿದರು. ಬಾಲ್ಯ ಗರ್ಭಿಣಿ ಪ್ರಕರಣ ತಡೆಗೆ  ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು’ ಎಂದು ಸೂಚಿಸಿದರು.