ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangaluru): 2025 ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾದ್ಯಮ ಗೋಷ್ಠಿಯ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಒಟ್ಟು ಶೇ. 74.04 ಫಲಿತಾಂಶ ಬಂದಿದೆ. ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದು, ಉಡುಪಿಗೆ ಒಟ್ಟು 93.90% ಫಲಿತಾಂಶ ದೊರಕಿದೆ.
ಇನ್ನೂ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ಶೇ.93.57 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಉತ್ತರಕನ್ನಡ ಜಿಲ್ಲೆ ಆರನೇ ಸ್ಥಾನ ಪಡೆದುಕೊಂಡಿದ್ದು ಶೇ 82.93 ಫಲಿತಾಂಶ ಪಡೆದಿದೆ. ಯಾದಗಿರಿ ಕೊನೆಯ ಸ್ಥಾನ ಪಡೆದಿದ್ದು 48.45 ಶೇ ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್ಫರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದೀಪಶ್ರೀ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆ 600 ರಲ್ಲಿ 599 ಅಂಕ ಪಡೆದಿದ್ದಾಳೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600 ಅಂಕಕ್ಕೆ ಸಂಜನಾ 597 ಅಂಕ ಪಡೆದುಕೊಂಡು ಸಾಧನೆ ಮಾಡಿದ್ದಾಳೆ. ಬಳ್ಳಾರಿಯ ಕೆ.ನಿರ್ಮಲಾ ಎಂಬುವವರು 596 ಅಂಕ ಗಳಿಸಿದ್ದಾರೆ.
ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದ ಒಟ್ಟು ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಇಲಾಖೆಯ ವೆಬ್ ಸೈಟ್ ಜೊತೆಗೆ ಆಯಾ ಕಾಲೇಜುಗಳಲ್ಲಿಯೂ ಫಲಿತಾಂಶ ಪ್ರಕಟವಾಗಲಿದೆ.