ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬಿಹಾರ(Bihar): ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಪುತ್ರಿಯನ್ನ ಮನೆಗೆ ಕರೆಸಿಕೊಂಡಿದ್ದ ತಂದೆ ಆಕೆಯನ್ನು ಕೊಂದು ಹಾಕಿದ ದಾರುಣ ಘಟನೆ ಬಿಹಾರದಲ್ಲಿ(Bihar) ನಡೆದಿದೆ.
ಬಿಹಾರದ ಸಮಷ್ಟಿಪುರದಲ್ಲಿ ಈ ಘಟನೆ ನಡೆದಿದೆ. ತಂದೆಯಿಂದಲೇ ಕೊಲೆಗೀಡಾದ ಯುವತಿಯನ್ನು ಸಾಕ್ಷಿ ಎಂದು ಗುರುತಿಸಲಾಗಿದೆ. 25 ವರ್ಷದ ಸಾಕ್ಷಿ ತನ್ನದೇ ನೆರೆ ಮನೆಯ ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ಆತನೊಂದಿಗೆ ಮನೆ ಬಿಟ್ಟು ದೆಹಲಿಗೆ ಎಸ್ಕೇಪ್(Delhi escape) ಆಗಿದ್ದಳು.
ಕುಟುಂಬಸ್ಥರು ಆಕೆಯನ್ನು ಪುಸಲಾಯಿಸಿ ಮನೆಗೆ ಬರುವಂತೆ ಮಾಡಿದ್ದರು. ಆದರೆ ಮನೆಗೆ ಬಂದ ಮಗಳನ್ನು ಆಕೆಯ ತಂದೆ ಮುಖೇಶ್ ಸಿಂಗ್ ಎಂಬಾತ ನಿಗೂಢವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ಗೊತ್ತಾಗಿದೆ.
ಮೊಹಿಯುದ್ದೀನ್ ನಗರದ ಟಾಡಾ ಗ್ರಾಮದಲ್ಲಿ ಸಾಕ್ಷಿ ಕೆಲ ತಿಂಗಳುಗಳಿಂದ ನೆರೆಮನೆಯಲ್ಲಿ ವಾಸಿಸುತ್ತಿದ್ದ ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು(Love). ಆದರೆ ತನ್ನ ಪ್ರೀತಿಗೆ ಮನೆಯವರು ಒಪ್ಪುವುದಿಲ್ಲ ಎಂದು ಆಕೆ ಕೆಲ ವಾರಗಳ ಹಿಂದೆ ಪ್ರಿಯಕರನೊಂದಿಗೆ ದೆಹಲಿಗೆ ಪರಾರಿಯಾಗಿದ್ದಳು. ಈ ವಿಚಾರ ಟಾಡಾ ಗ್ರಾಮದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಬಳಿಕ ಮನೆಯವರು ಆಕೆಯ ಸ್ನೇಹಿತರ ನೆರವಿನಿಂದ ಸಾಕ್ಷಿಯನ್ನು ಸಂಪರ್ಕಿಸಿ ಆಕೆ ಮನೆಗೆ ಬರುವಂತೆ ಮನವಿ ಮಾಡಿದ್ದರು. ಆರಂಭದಲ್ಲಿ ಆಕೆ ಒಪ್ಪಿರಲಿಲ್ಲವಾದರೂ ಬಳಿಕ ಮನೆಯವರು ಮದುವೆಗೆ ಒಪ್ಪಿದ್ದಾರೆ ಎಂದು ಪುಸಲಾಯಿಸಿದ್ದಾರೆ. ಆಗ ಸಾಕ್ಷಿ ಮನೆಗೆ ಬರಲು ಒಪ್ಪಿ ಬಂದಿದ್ದಳು.
ವಾರದ ಹಿಂದಷ್ಟೇ ದೆಹಲಿಯಿಂದ ಮೊಹಿಯುದ್ದೀನ್ ನಗರಕ್ಕೆ ಬಂದ ಯುವತಿ ಇದ್ದಕ್ಕಿದ್ದಂತೆ ನಾಪತ್ತೆಯಾದಳು. ಮೃತಳ ತಾಯಿಗೆ ಅನುಮಾನ ಬಂದಾಗ, ಆಕೆ ತನ್ನ ಗಂಡನನ್ನು ಕೇಳಿದ್ದಾಳೆ. ಆಗ ತಂದೆ ಮುಕೇಶ್ ಸಿಂಗ್ ಮಗಳು ಮತ್ತೆ ಮನೆ ಬಿಟ್ಟು ಹೋಗಿದ್ದಾಳೆಂದು ಉಡಾಫೆ ಉತ್ತರ ನೀಡಿದ್ದಾನೆ. ಇದರಿಂದ ಅನುಮಾನಗೊಂಡ ಸಾಕ್ಷಿ ತಾಯಿ ತನ್ನ ಸಹೋದರ ವಿಪಿನ್ ಸಿಂಗ್ ಮತ್ತು ಸಹೋದರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಅನುಮಾನಗೊಂಡು ಪೊಲೀಸ್ ದೂರು(Police Complaint) ದಾಖಲಿಸಿದ್ದಾರೆ.
ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದರು. ಮನೆಯ ಹಿಂದಿನ ಸ್ನಾನಗೃಹಕ್ಕೆ ಬೀಗ ಹಾಕಿರುವುದನ್ನು ನೋಡಿದಾಗ, ಅದನ್ನು ತೆರೆದಾಗ ಅದರೊಳಗೆ ಶವ ಪತ್ತೆಯಾಗಿದೆ. ಬಳಿಕ ಪೊಲೀಸರು ಮನೆಯವರನ್ನು ವಿಚಾರಣೆಗೊಳಪಡಿಸಿದಾಗ ತಂದೆ ಮುಖೇಶ್ ಸಿಂಗ್ ಹೇಳಿಕೆಯಲ್ಲಿ ಅನುಮಾನಗೊಂಡು ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ.
ಇದನ್ನು ಓದಿ : ಇನ್ಮುಂದೆ ಈ ಏರಿಯಾದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ಮಾಡುವಾಂಗಿಲ್ಲ.
ಹೆಬ್ಬಾರ್ ಕ್ಷೇತ್ರದಲ್ಲಿ ಬಿಜೆಪಿ ಅಬ್ಬರ. ಯಲ್ಲಾಪುರದಲ್ಲಿ ಜನಾಕ್ರೋಶ ಯಾತ್ರೆ.
ಕಾರವಾರದ ಯೋಧ ಹೃದಯಘಾತದಿಂದ ನಿಧನ. ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು, ನಾಗರಿಕರು.

