ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar) : ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ 17 ವರೆಗೆ ರೆಡ್ ಅಲರ್ಟ್(Ref Alert) ಘೋಷಣೆಯ ಜೊತೆಗೆ ನಿರಂತರ ಮಳೆಯಾಗುತ್ತಿರುವುದರಿಂದ  ಜಿಲ್ಲೆಯ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಕಾರವಾರ(Karwar), ಅಂಕೋಲಾ(Ankola), ಕುಮಟಾ(Kumta), ಹೊನ್ನಾವರ(Honnavar), ಭಟ್ಕಳ(Bhatkal) ಹಾಗೂ ಶಿರಸಿ(Sirsi), ಸಿದ್ದಾಪುರ(Siddapur), ಯಲ್ಲಾಪುರ(Yallapur) ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ರಜೆ ನೀಡಲಾಗಿದೆ. ‌ ಅನಾನುಕೂಲ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲೂಕುಗಳಿಗೆ   ಮಾತ್ರ ರಜೆ ಘೋಷಿಸಿ ಆದೇಶ ಮಾಡಲಾಗಿದೆ.

ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಮತ್ತು ಶಿರಸಿ ರವರು ಕಾರ್ಯ ರೂಪಕ್ಕೆ ತರುವಂತೆ ತಿಳಿಸಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : ಜೆಜೆಎಂ ಕಾಮಗಾರಿಯಲ್ಲಿ ಸಿಲುಕಿದ ಸರ್ಕಾರಿ ಬಸ್

ದೇವಿಮನೆ ಘಟ್ಟದಲ್ಲಿ ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ವಾಹನಗಳ ಸಂಚಾರ ನಿರ್ಬಂಧ.

ಬೈಕ್ ಗಳ‌ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಭಟ್ಕಳದಲ್ಲಿ ಅಧಿಕಾರಿಗಳನ್ನ ಬೇಸ್ತು ಬೀಳಿಸಿದ ಹುಸಿ ಕರೆ.