ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar) : ಭಾರತೀಯ ಹವಮಾನ ಇಲಾಖೆ ಉತ್ತರಕನ್ನಡ ಜಿಲ್ಲೆಯಲ್ಲಿ ಜೂನ್ 27 ವರೆಗೆ ಬಾರೀ ಮಳೆಯಾಗುತ್ತಿರುವ ಸಂದೇಶ ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯ ಕೆಲ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 25ರಂದು ರಜೆ (Holiday) ಘೋಷಿಸಲಾಗಿದೆ.
ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಯಲ್ಲಾಪುರ(Yallapur), ಹಳಿಯಾಳ(Haliyal), ಜೋಯಿಡಾ(Joida), ದಾಂಡೇಲಿ(Dandeli) ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ರಜೆ ನೀಡಲಾಗಿದೆ. ಅನಾನುಕೂಲ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ (Holiday Declared) ಆದೇಶ ಮಾಡಲಾಗಿದೆ.
ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿರಸಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರವರು ಕಾರ್ಯ ರೂಪಕ್ಕೆ ತರುವಂತೆ ತಿಳಿಸಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಶಾಲಾ ವಿದ್ಯಾರ್ಥಿ ಅಪಘಾತದಲ್ಲಿ ದುರ್ಮರಣ. ಬಿಕ್ಕಿಬಿಕ್ಕಿ ಅತ್ತ ಶಿಕ್ಷಕರು.
ಓವರ್ ಟೇಕ್ ಮಾಡಿದ ಕಾರು. ಅನಂತಕುಮಾರ ಚಾಲಕ, ಗನ್ ಮ್ಯಾನ್ ನಿಂದ ಡಿಶುಂ ಡಿಶುಂ.