ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಶಿರಸಿ(Sirsi):  ತಾಲೂಕಿನ ಮರ್ಕಿಕೊಡ್ಲು ಗ್ರಾಮದ ಹಲಗೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ(Cylinder Blast) ಯುವತಿಯೋರ್ವಳು ದುರ್ಮರಣ ಹೊಂದಿದ್ದಾಳೆ.

ಮೃತ ಯುವತಿಯನ್ನು ರಂಜನಾ ನಾಗಪ್ಪ ದೇವಾಡಿಗ (21) ಎಂದು ಗುರುತಿಸಲಾಗಿದೆ. ಪೋಷಕರು ಮನೆಯಲ್ಲಿ ಇರದೆ ಕೆಲಸಕ್ಕೆ ಹೋಗಿದ್ದರು. ಮಾಹಿತಿ ಪ್ರಕಾರ ಯುವತಿಯು ಅನಾರೋಗ್ಯದ ಕಾರಣದಿಂದ ಕಾಲೇಜಿಗೆ ಹೋಗದೆ ಮನೆಯಲ್ಲೇ ಉಳಿದುಕೊಂಡಿದ್ದಳು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿಯೇ ಈ ದುರಂತ ಸಂಭವಿಸಿದೆ.

ಸ್ಫೋಟ ಘಟನೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಘಟನೆ ನಡೆದ ತಕ್ಷಣ ಶಿರಸಿ ಗ್ರಾಮೀಣ ಠಾಣೆಯ(Sirsi Rural Station) ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಇದನ್ನು ಓದಿ : ಕಾರವಾರದಲ್ಲಿ ಹೂ ಹಣ್ಣು ವ್ಯಾಪಾರಿಗಳ ಜಗಳ. ಮಹಿಳೆಯರ ಮಾರಾಮಾರಿ.

ಮುರ್ಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದ ಅಲೆಗೆ ಸಿಲುಕಿದ ಕುಟುಂಬ. ಬಾಲಕ ನೀರುಪಾಲು.

ಬೀದಿ ಬದಿ ತರಕಾರಿ, ಸೊಪ್ಪು ಮಾರುವ ವ್ಯಾಪಾರಿಗಳನ್ನ ಒಕ್ಕಲೆಬ್ಬಿಸಿದ ನಗರಸಭೆ ವಿರುದ್ದ ಪ್ರತಿಭಟನೆ.

GST ಜಾರಿ ಮಾಡಿದ್ದೂ ಮೋದಿ. ಹೆಚ್ಚೆಚ್ಚು ವಿಧಿಸಿದ್ದೂ ಅವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ: ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ