ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ಮಾಟ-ಮಂತ್ರದ ಕಾರಣ ನೀಡಿ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಸಂಬಂಧ ಭಟ್ಕಳ(Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಭಟ್ಕಳ(Bhatkal) ತಾಲೂಕಿನ ಬೆಳಕೆ ಗ್ರಾಮದ(Belle Village) ಜ್ಯೋತಿ ಮಂಜುನಾಥ ನಾಯ್ಕ ಎಂಬುವವರು ದೂರಿನ ಮೇರೆಗೆ, ಹೊನ್ನೆಮಡಿ ಗ್ರಾಮದ ದೇವಿದಾಸ ಮಾದೇವ ನಾಯ್ಕ (42) ಹಾಗೂ ವೆಂಕಟೇಶ್ ಮಾದೇವ ನಾಯ್ಕ (37) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.
ಐದು ದಿನಗಳ ಹಿಂದೆ ಆರೋಪಿತರ ತಂದೆ ಮೃತಪಟ್ಟಿದ್ದರು. ಜ್ಯೋತಿ ಅವರ ಪತಿ, ಅವರ ಅಕ್ಕ ಹಾಗೂ ಅಕ್ಕನ ಪತಿ ಮೃತರ ಮನೆಗೆ ಸಂತಾಪ(Tribute) ಸೂಚಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ದೇವಿದಾಸ ನಾಯ್ಕ ಅವರು, “ನೀವು ಮಾಟ-ಮಂತ್ರ ಮಾಡಿಸಿ ನಮ್ಮ ತಂದೆಯ ಸಾವಿಗೆ ಕಾರಣರಾಗಿದ್ದೀರಿ” ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, “ಇನ್ನು ಮುಂದೆ ನಮ್ಮ ಮನೆಗೆ ಬರಬೇಡಿ” ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ವಿಚಾರಕ್ಕೆ ಜ್ಯೋತಿ ಅವರ ಪತಿ ಪ್ರಶ್ನಿಸಿದಾಗ, ಇನ್ನೋರ್ವ ವೆಂಕಟೇಶ್ ನಾಯ್ಕ ಕೈಯಿಂದ ಹಲ್ಲೆ ನಡೆಸಿ ತಳ್ಳಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಮೊದಲ ಆರೋಪಿ ದೇವಿದಾಸ ನಾಯ್ಕ ತನ್ನ ಕಾರಿನಲ್ಲಿದ್ದ ಸ್ಟೀಲ್ ರಾಡ್ ತೆಗೆದುಕೊಂಡು ಜ್ಯೋತಿ ಅವರ ಪತಿಯ ತಲೆಯ ಎಡಭಾಗಕ್ಕೆ ಹೊಡೆದು ಗಾಯಪಡಿಸಿದ್ದಾನೆ. ಹಲ್ಲೆ(Assault) ತಡೆಯಲು ಮುಂದಾದ ಜ್ಯೋತಿ ಅವರ ಮೇಲೆಯೂ ಆರೋಪಿಗಳು ಹಲ್ಲೆ ನಡೆಸಿದ್ದು, ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಜ್ಯೋತಿ ಮಂಜುನಾಥ ನಾಯ್ಕ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ(Bhatkal Rural Police Station) ದೂರು ದಾಖಲಿಸಿದ್ದು ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
