ಸಿದ್ದಾಪುರ: ಸಾಗರ ಮತ್ತು ಸಿದ್ದಾಪುರ ರಾಜ್ಯ ಹೆದ್ದಾರಿಯ ಅರೆಂದೂರು ಸಮೀಪ ಭೀಕರ ಅಪಘಾತ ಸಂಭವಿಸಿದೆ.

ಕೆಎಸ್ಆರ್ಟಿಸಿ ಬಸ್ ಮತ್ತು ಪಿಕ್ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಪಿಕ್ಅಪ್ ವಾಹನ ಚಾಲಕನಿಗೆ ಗಂಭೀರ ಗಾಯವಾಗಿದೆ. ಜೊತೆಗೆ ಇನ್ನೂ ಎಂಟು ಪ್ರಯಾಣಿಕರಿಗೆ ಗಾಯವಾಗಿದೆ.

ಬಸ್ ಶಿರಸಿಯಿಂದ ಸಾಗರಕ್ಕೆ ಹೋಗುತ್ತಿತ್ತು.  ಸಾಗರ ಕಡೆಯಿಂದ ಸಿದ್ದಾಪುರ ಕಡೆಗೆ ಪಿಕ್ಅಪ್ ವಾಹನ ಬರುತ್ತಿತ್ತು. ಅರೇಂದೂರು ಬಳಿ ಅಪಘಾತ ನಡೆದಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.