ಭಟ್ಕಳ : ಜಾನುವಾರುಗಳನ್ನ ಸಾಗಿಸುತ್ತಿದ್ದ ಮೂವರನ್ನು ಹಿಂದು ಸಂಘಟನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ ನೀಡಿದ ಘಟನೆ ಭಟ್ಕಳದಲ್ಲಿ ನಡೆದಿದೆ.
ಗುರುವಾರ ರಾತ್ರಿ ಗ್ರಾಮೀಣ ಪೊಲೀಸ್ ಠಾಣೆ ಮುಂದೆ ಅಕ್ರಮ ಜಾನುವಾರು ಸಾಗಾಟ ತಡೆಯುವಂತೆ ಸಂಘಟನೆ ಕಾರ್ಯಕರ್ತರು ಪೊಲೀಸರನ್ನ ಆಗ್ರಹಿಸಿದರು. ರಾಜಾರೋಷವಾಗಿ ಅಕ್ರಮವಾಗಿ ಸಾಗಿಸುತ್ತಿದ್ದರೂ ನಿರ್ಲಕ್ಷ ಕಾಣುತ್ತಿದೆ. ಶಿರಾಲಿ ಸೇರಿದಂತೆ ವಿವಿದೆಡೆ ಹೆಚ್ಚು ತಪಾಸಣೆ ನಡೆಸುವಂತೆ ಒತ್ತಾಯಿಸಿದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪ್ರತಿಭಟನೆಗೂ ಕಾರ್ಯಕರ್ತರು ಮುಂದಾದರು.
ಭಟ್ಕಳ – ಸಾಗರ ರಸ್ತೆಯಲ್ಲಿ ಮಹೇಂದ್ರ ಮ್ಯಾಕ್ಸಿ ವಾಹನದಲ್ಲಿ ಸಾಗಿಸುತ್ತಿದ್ದ ಮೂರು ಕೋಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು ಶಿವಮೊಗ್ಗ ಮೂಲದ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾರಂಗಿ ಹೋಬಳಿಯ ಬಾನಕುಳಿಯ ಮಂಜು ನಾಯ್ಕ, ಚಾಲಕ ಚಂದ್ರಪ್ಪ ಹಾಗೂ ಭಟ್ಕಳದ ಜಟ್ಟಪ್ಪ ನಾಯ್ಕ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.