ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar): ಗಂಟಲೊಳಗೆ ಮೀನು(Fish) ಸಿಲುಕಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಕೇರಳದ(Keral) ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ.
ಆದರ್ಶ್ ಅಲಿಯಾಸ್ ಉನ್ನಿ (25) ಮೃತ ದುರ್ದೈವಿಯಾಗಿದ್ದಾನೆ. ನಿನ್ನೆ ಭಾನುವಾರ ರಜಾ ದಿನವಾಗಿದ್ದರಿಂದ ಆದರ್ಶ್ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯಲು ಹೋಗಿದ್ದ. ಒಂದು ಮೀನು ಸಿಕ್ಕಾಗ ಖುಷಿಯಲ್ಲಿದ್ದ ಆತ ಮೀನನ್ನ ಬಾಯಲ್ಲಿ ಕಚ್ಚಿಕೊಂಡು ಮತ್ತೊಂದು ಮೀನನ್ನ ಹಿಡಿಯಲು ಯತ್ನಿಸುತ್ತಿದ್ದಾಗ ಬಾಯಲ್ಲಿದ್ದ ಮೀನು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆತ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಭಟ್ಕಳದಲ್ಲಿ ಶಾಲಾ ವಾಹನ ಮತ್ತು ಲಾರಿ ನಡುವೆ ಅಪಘಾತ.
ಮೀನುಗಾರರ ಶಕ್ತಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಡಿ. ಬಂದರು ಯೋಜನೆ ವಿರುದ್ಧ ಗಣಪತಿ ಉಳ್ವೆಕರ್ ಗುಡುಗು.