ಭಟ್ಕಳ : ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಶಿರಾಲಿ ಬಳಿಯ ರಾ. ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಅಳ್ವೆಕೋಡಿಯ ರಾಮಚಂದ್ರ ನಾಗೇಶ್ ಮೊಗೇರ (42) ಸಾವನ್ನಪ್ಪಿದ ದುರ್ದೈವಿ. ಭಾನುವಾರ ರಾತ್ರಿ ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್ ಮೇಲೆ ಬರುತ್ತಿದ್ದರು. ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಅಪಘಾತಪಡಿಸಿದ ಸ್ವಿಪ್ಟ್ ಡಿಸೈರ್ ಕಾರು ವೆಂಕಟಾಪುರ ಬಳಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಗಂಭೀರ ಗಾಯಗೊಂಡ ಸವಾರನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರು ಪ್ರಯೋಜನವಾಗಲಿಲ್ಲ. ಮೃತನಿಗೆ ಮೂವರು ಮಕ್ಕಳಿದ್ದು ಕುಟುಂಬಸ್ಥರು ಆಕ್ರಂದನ ಮುಗಿಲುಮುಟ್ಟಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.