ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ದಾಂಡೇಲಿ(Dandeli) : ಗ್ಯಾಸ್ ಸಿಲೆಂಡರ್ ಗಳನ್ನ ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ (Accident) ಹೊಡೆದ ಘಟನೆ  ಹಳಿಯಾಳ – ದಾಂಡೇಲಿ (Haliyal-Dandeli) ರಾಜ್ಯ ಹೆದ್ದಾರಿಯ  ಆಲೂರು – ಕರ್ಕಾ ಮಧ್ಯೆ ನಡೆದಿದೆ.

ಅಪಘಾತದ ಪರಿಣಾಮವಾಗಿ ವಾಹನ ರಸ್ತೆ ಬಿಟ್ಟು ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿದ್ದು ಚಾಲಕ ಗಾಯಗೊಂಡಿದ್ದಾನೆ. ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ  ವಿನಾಯಕ ಚ್ಯಾಟಿ  ಗಾಯಗೊಂಡ ಚಾಲಕನಾಗಿದ್ದಾನೆ.

ಅಪಘಾತದಲ್ಲಿ ಈತ ವಾಹನದೊಳಗಡೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳೀಯರು ವಾಹನದ ಬಾಗಿಲು ಮುರಿದು ಚಾಲಕನನ್ನು ವಾಹನದಿಂದ ಕೆಳಗಿಳಿಸಿದ್ದಾರೆ. ತಕ್ಷಣವೇ ಗಾಯಾಳುವನ್ನ 108 ಆಂಬುಲೆನ್ಸ್ ಮೂಲಕ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ : ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆಯ ಸೈಕಲ್ ರ‍್ಯಾಲಿಗೆ ಅದ್ದೂರಿ ಸ್ವಾಗತ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ