ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ಬೈಕ್ ಡಿಕ್ಕಿ(Bike Accident) ಹೊಡೆದ ಪರಿಣಾಮವಾಗಿ ಪಾದಚಾರಿಯೋರ್ವ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ (NH66) ತೂರ್ ಮಸೀದಿ ಬಳಿ ಸೋಮವಾರ ಸಂಭವಿಸಿದೆ.
ಮೃತರನ್ನು ನಿಶಾತ್ ನರ್ಸಿಂಗ್ ಹೋಮ್(Nishat Nursing Home) ಹಿಂಭಾಗದ ಫ್ಲ್ಯಾಟ್ನ ನಿವಾಸಿ ಮೊಹಮ್ಮದ್ ಇಬ್ರಾಹಿಂ (64) ಎಂದು ಗುರುತಿಸಲಾಗಿದೆ. ಮೂಲತಃ ಬೆಂಗಳೂರಿನವರಾದ ಇವರು ಕಳೆದ 25 ವರ್ಷಗಳಿಂದ ಭಟ್ಕಳದಲ್ಲಿ ನೆಲೆಸಿದ್ದು, ತೂರ್ ಮಸೀದಿಯಲ್ಲಿ ಬಹುಕಾಲದಿಂದ ಮುಅಝಿನ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ರಸ್ತೆ ಬದಿಯಲ್ಲಿ ಮನೆ ಕಡೆಗೆ ನಡೆದು ಹೋಗುತ್ತಿದ್ದಾಗ ವೇಗವಾಗಿ ಹಾಗೂ ನಿರ್ಲಕ್ಷದಿಂದ ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ತಲೆ ಮತ್ತು ಕೈಗೆ ತೀವ್ರ ಗಾಯಗಳಾಗಿದ್ದು, ಕೂಡಲೇ ಅವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ(Bhatkal Government Hospital) ಕರೆದೊಯ್ಯಲಾಯಿತು. ಗಂಭೀರ ಸ್ವರೂಪದ ಗಾಯಗಳಾಗಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯುತ್ತಿದ್ದಾಗ ಮಾರ್ಗಮಧ್ಯೆ ಮೊಹಮ್ಮದ್ ಇಬ್ರಾಹಿಂ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಬೈಕ್ ಸವಾರರಿಗೂ ಗಂಭೀರ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆಗೆ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಭಟ್ಕಳ ನಗರ ಠಾಣೆಯಲ್ಲಿ(Bhatkal Town Police Station) ದೂರು ದಾಖಲಾಗಿದೆ.
ಇದನ್ನು ಓದಿ : ಪತ್ರಕರ್ತ ಸಂದೀಪ್ ಸಾಗರ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ
ಗೋ ಕಳ್ಳರಿಗೆ ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾಕಿ. ಸಚಿವ ಮಾಂಕಾಳ್ ವೈದ್ಯ ಗುಡುಗು.
ತಮಗಿಷ್ಟದ ಸ್ಥಳಕ್ಕೆ ಭೇಟಿ ನೀಡುತ್ತಿರುವ ನಟ ಶಿವರಾಜಕುಮಾರ್. ಯಾಣಕ್ಕೆ ಭೇಟಿ