ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಯಲ್ಲಾಪುರ (Yallapur) : ತಾಲೂಕಿನ ಗುಳ್ಳಾಪುರ ರಾ . ಹೆದ್ದಾರಿ 63ರಲ್ಲಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ ಯಾಗಿ ಎಂಟಕ್ಕಿಂತ ಹೆಚ್ಚು ಜನ ಸಾವನ್ನಪ್ಪಿದ ಘಟನೆ ನಡೆದಿದೆ.

ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಮತ್ತು ಅರೆಬೈಲ್ ನಡುವೆ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಹಾವೇರಿ ಜಿಲ್ಲೆಯ ಸವಣೂರುನಿಂದ ಕುಮಟಾದ ಕಡೆ ಹಣ್ಣು ತರಕಾರಿ ತುಂಬಿ ಲಾರಿ ತೆರಳುತಿತ್ತು. ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಗಾಯಗೊಂಡವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.