ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಭಟ್ಕಳ(Bhatkal): ಸುಳ್ಳು ಸುದ್ದಿ ಹಬ್ಬಿಸಿ ಯಾವುದೇ ಅನುಮತಿ ಇಲ್ಲದೆ ರಾಷ್ಟ್ರೀಯ ಹೆದ್ದಾರಿ(National Highway) ತಡೆ ನಡೆಸಿದಲ್ಲದೆ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಕಾನೂನು ಉಲ್ಲಂಘಿಸಿದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ ನಾರಾಯಣ್ ಹೇಳಿದ್ದಾರೆ.
ಭಟ್ಕಳದಲ್ಲಿ ಪ್ರತಿಭಟನಾ ಸಂದರ್ಭದಲ್ಲಿ ಹಾಜರಿದ್ದ ಮುಖಂಡರ ಜೊತೆ ಘಟನಾ ಸಂಬಂಧ ಮಾತುಕತೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಕೆಲವರು ರೌಡಿ ಚಟುವಟಿಕೆಯನ್ನು ಬಿಟ್ಟು ಉತ್ತಮ ಜೀವನ ನಡೆಸಬೇಕು ಎಂಬುದು ನಮ್ಮ ಉದ್ದೇಶ. ಈ ಉದ್ದೇಶದಿಂದಲೇ ಪೊಲೀಸ್ ಭಾಷೆಯಲ್ಲಿ ನಾವು ಎಚ್ಚರಿಕೆ ನೀಡಿದ್ದು ನಿಜ. ಆದರೆ ಅಲ್ಲಿಂದ ಹೊರ ಬಂದ ಮೇಲೆ ಎಸ್ಪಿ ಅವರು ಹಲ್ಲೆ ಮಾಡಿದ್ದಾರೆಂದು ಸುಳ್ಳು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೇನು ಆಸ್ಪತ್ರೆ ವರದಿ ಬರಲಿದೆ. ವೈದ್ಯಕೀಯ ವರದಿಯಿಂದ ಸತ್ಯ ಬಹಿರಂಗವಾಗಲಿದೆ. ನಾನು ಹಲ್ಲೆ ಮಾಡಿದ್ದೇನೆ ಎಂದು ಅವರು ಸಾಬೀತುಪಡಿಸಲಿ ಎಂದರು.
ಸುಖಾ ಸುಮ್ಮನೆ ಗೊಂದಲ ಸೃಷ್ಟಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವವರ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಎಂ.ನಾರಾಯಣ್ ಹೇಳಿದ್ದಾರೆ.
ಇದನ್ನು ಓದಿ : ಪೊಲೀಸರ ದಾಳಿ. ಮನೆಯೊಳಗೆ ಅಂದರ್ ಬಾಹರ್ ಆಡುತ್ತಿದ್ದವರು ಅಂದರ್.
ಯಾಸಿನ್ ಭಟ್ಕಳ್ ಸೇರಿ ಐವರಿಗೆ ಮರಣ ದಂಡನೆ ಫಿಕ್ಸ್. ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್.