ಭಟ್ಕಳ : ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಅಳ್ವೆಕೋಡಿಯ ಸಮುದ್ರ ಮತ್ತು ನದಿಯ ಸಂಗಮ ತೀರದಲ್ಲಿ ವಿರಾಜಿಸುತ್ತಿರುವ, ಅತೀ ಪುರಾತನವಾದ ಜಾಗೃತ ದೇವತೆ ನಮ್ಮೆಲ್ಲರ ಆರಾಧ್ಯದೇವಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ  ದೇವರ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವದ ತಯಾರಿ ನಡೆದಿದೆ.

ಜೂನ್ 29 ರ ಶನಿವಾರ ಜೇಷ್ಠ ಕೃಷ್ಣ ಅಷ್ಟಮಿಯಿಂದ ಜುಲೈ 09  ಮಂಗಳವಾರ ಆಷಾಢ ಶುಕ್ಲ ಚತುರ್ಥಿಯವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ.

ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನ ಮತ್ತು ದಿವ್ಯ ಉಪಸ್ಥಿತಿಯಲ್ಲಿ ನೂತನ ಯಜ್ಞಮಂಟಪದ ಉದ್ಘಾಟನೆ. ಗೋಪುರಕ್ಕೆ ತಾಮ್ರದ ಹೊದಿಕೆ, ಶಿಖರ ಕಲಶ ಪ್ರತಿಷ್ಠೆ, ಶ್ರೀ ಶತಚಂಡಿಯಾಗ, ಶ್ರೀ ಸೂಕ್ತ ಹವನ, ಶ್ರೀ ಪಂಚದುರ್ಗಾ ಹವನ, ಶ್ರೀ ಲಕ್ಷ ಕುಂಕುಮಾರ್ಚನೆ, ಶ್ರೀ ದುರ್ಗಾನಮಸ್ಕಾರ ಹಾಗೂ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿಸಲಾಗುವುದು. ಭಗವದ್ಭಕ್ತರಾದ ತಾವೆಲ್ಲರೂ ಕುಟುಂಬ ಸಮೇತರಾಗಿ ಮಹೋತ್ಸವದಲ್ಲಿ ಭಾಗವಹಿಸಿ, ಶ್ರೀ ಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ಜಗನ್ಮಾತೆಯ ಹಾಗೂ ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಬೇಕೆಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.