ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) : ಉತ್ತರಕನ್ನಡ ಜಿಲ್ಲೆಯ(Uttarakannada) ಯಲ್ಲಾಪುರ (Yallapura) ಹಾಗೂ ರಾಯಚೂರು(Rayachuru) ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ(State) ಹಾಗೂ ಕೇಂದ್ರ ಸರ್ಕಾರದಿಂದ(Central Government) ಪರಿಹಾರ ಘೋಷಿಸಲಾಗಿದೆ.

ರಾಜ್ಯ ಸರ್ಕಾರದಿಂದ ಬೆಳಿಗ್ಗೆ ಮೃತರಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಲಾಗಿತ್ತು. ದುರ್ಘಟನೆಯಲ್ಲಿ  ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಅತಿ ವೇಗದ ಚಾಲನೆ, ಅವಸರ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಆದ್ದರಿಂದ ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiha) ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಮನವಿ ಮಾಡಿದ್ದಾರೆ.

ಇನ್ನೊಂದೆಡೆ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಕೂಡ  ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ತೀವ್ರ ದುಃಖ ತಂದಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಮೃತರ ಕುಟುಂಬಸ್ಥರಿಗೆ PMNRF ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಕೇಂದ್ರ ಗೃಹ ಸಚಿವ(Home Minister) ಅಮಿತ್ ಶಾ (Amit Shah) ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದು, ಉತ್ತರ ಕನ್ನಡದ ಯಲ್ಲಾಪುರದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಮೂಲ್ಯ ಜೀವಗಳು ಬಲಿಯಾಗಿದ್ದು ಘಟನೆಯಿಂದ ಬಹಳ ದುಃಖವಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳು, ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ  ಯಲ್ಲಾಪುರ ತಾಲೂಕಿನ ರಾ ಹೆದ್ದಾರಿ 63 ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ತರಕಾರಿ, ಹಣ್ಣು ತುಂಬಿದ್ದ ಲಾರಿ ಪಲ್ಟಿಯಾಗಿ  10 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಇದನ್ನು ಓದಿ : ಭಟ್ಕಳದಲ್ಲಿ ಗೋಮಾಂಸ ಅಡ್ಡೆಗೆ ನುಗ್ಗಿದ ಪೊಲೀಸರು. ಮೂವರು ಆರೆಸ್ಟ್.

ಯಲ್ಲಾಪುರದಲ್ಲಿ ಭೀಕರ ಅಪಘಾತ. ಹತ್ತು ಜನರ ದುರ್ಮರಣ.

ರೇನಾಲ್ಟ್ ಶೋ ರೂಮ್ ಗೆ ಬೆಂಕಿ. ಕೋಟ್ಯಂತರ ರೂ ಮೌಲ್ಯದ ಕಾರುಗಳು ಅಗ್ನಿಗಾಹುತಿ

ಹಸುವಿನ ಹತ್ಯೆ ಪ್ರಕರಣ. ಐವರು ವಶಕ್ಕೆ. ಕೃತ್ಯದಲ್ಲಿ ತೊಡಗಿದವರ ಗಡಿಪಾರಿಗೆ ಕ್ರಮ