ಶಿರಸಿ(Sirsi) : ವಿಶ್ವ ಆರೋಗ್ಯ ಸಂಸ್ಥೆಯ (World Health Organaization) ಅಂಗ ಸಂಸ್ಥೆಯಾದ ʼಇಂಟರ್‌ ನ್ಯಾಶನಲ್‌ ಏಜನ್ಸಿ ಫಾರ್‌ ರಿಸರ್ಚ್‌ ಆಂಡ್‌ ಕ್ಯಾನ್ಸರ್‌ʼ ನೀಡಿರುವ “ಅಡಿಕೆ ಕ್ಯಾನ್ಸರ್ ಕಾರಕ” ಎಂಬುದು ಯಾವುದೇ ಆಧಾರವಿಲ್ಲದೆ ನೀಡಿದ ಅವೈಜ್ಞಾನಿಕ ವರದಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara hegde kageri) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕ್ಯಾಂಪ್ಕೋ(Campco) ಹಾಗೂ ಅನೇಕ ವಿಶ್ವವಿದ್ಯಾನಿಲಯಗಳು(University) ಅಡಿಕೆ(Arecnut) ಮೇಲೆ ಸಂಶೋಧನೆಗಳನ್ನು (Research) ಕೈಗೊಂಡು, ಅಡಿಕೆಯು ಕ್ಯಾನ್ಸರ್‌(Cancer) ಕಾರಕವಲ್ಲ ಎಂಬ ವರದಿಯನ್ನು ನೀಡಿದ್ದಲ್ಲದೆ, ಔಷಧೀಯ ಗುಣಗಳು ಸಹ ಅಡಕೆಯಲ್ಲಿರುವ ಬಗ್ಗೆ ಉಲ್ಲೇಖಿಸಿರುತ್ತಾರೆ. ಇಂತಹ ಯಾವುದೇ ವೈಜ್ಞಾನಿಕ ಸಂಶೋಧನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಅಂಗಸಂಸ್ಥೆಯು ವರದಿ ನೀಡಿರುವುದು ಸಮಂಜಸವೆನಿಸುವುದಿಲ್ಲ. ಈ ವಿಷಯಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಡಬ್ಲೂಎಚ್ಓ(WHO) ಸಂಸ್ಥೆಗೆ ತಿಳಿಸುವ ಮತ್ತು ಅವರಿಗೆ ಮನವರಿಕೆಯನ್ನೂ ಸಹ ಮಾಡುವ ಪ್ರಯತ್ನ ನಡೆಯುತ್ತಿದೆ. ಸಾವಿರಾರು ವರ್ಷಗಳಿಂದ ಅಡಿಕೆ ಬಳಕೆಯಲ್ಲಿದ್ದು ಪೂಜನೀಯ ಸ್ಥಾನದಲ್ಲಿದೆ. ತಂಬಾಕು ಬೇರ್ಪಟ್ಟ ಅಡಿಕೆ ಯಾವುದೇ ಕಾರಣಕ್ಕೂ ಆರೋಗ್ಯಕ್ಕೆ ಹಾನಿಕರವಲ್ಲ ಎನ್ನುವುದು ಅನೇಕ ಸಂಶೋಧನೆಗಳಿಂದ ಹಾಗೂ ವೈಜ್ಞಾನಿಕವಾಗಿಯೂ ದೃಡಪಟ್ಟಿದೆ. ಈ ಅಂಶಗಳನ್ನು ಮತ್ತು ವೈಜ್ಞಾನಿಕ ಸಂಶೋದನೆಯ ಅಂಶಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ(Central Government) ಆರೋಗ್ಯ ಇಲಾಖೆಯ(Health Department) ಗಮನಕ್ಕೆ ತಂದಿದ್ದು ಇರುತ್ತದೆ. ಈ ವಿಷಯಗಳ ಬಗ್ಗೆ ಸರಕಾರಿ ಮಟ್ಟದಲ್ಲೂ ಸಹ ಗಂಭೀರವಾಗಿ ಪ್ರಯತ್ನಿಸುವಂತೆ ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಇಲಾಖೆಯ ಮುಖ್ಯಸ್ಥರುಗಳಿಗೆ ಮನವರಿಕೆ ಮಾಡುವ ಕುರಿತು ಕ್ರಮ ಕೈಗೊಂಡಿದ್ದು, ಇನ್ನುಮುಂದೆಯು ಸಹ ಈ ಕುರಿತು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದಿದ್ದಾರೆ.

ಈಗಾಗಲೇ ಕ್ಯಾಂಪ್ಕೋ ಸೇರಿದಂತೆ ರಾಜ್ಯದ ಪ್ರಮುಖ ಸಹಕಾರಿ ಸಂಘಗಳು ಮತ್ತು ಸಂಶೋದನಾ ಸಂಸ್ಥೆಗಳು ಅಡಿಕೆ ಬೆಳೆಗಾರರ ಹಿತರಕ್ಷಣೆ ಕುರಿತಂತೆ ಸಕ್ರಿಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯಲ್ಲಿ ಪಾಲ್ಗೋಳ್ಳುವಿಕೆ ಅತೀ ಮುಖ್ಯವಾಗಿದೆ.

ಆಗಾಗ ಅಡಿಕೆ ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಇಂತಹ ಷಡ್ಯಂತ್ರಗಳನ್ನು ತಡೆಯಲು ಕೇಂದ್ರ ಹಣಕಾಸು, ವಾಣಿಜ್ಯ ಹಾಗೂ ಆರೋಗ್ಯ ಇಲಾಖೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಕಾಲಕಾಲಕ್ಕೆ ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ಅಗತ್ಯವಾದ ಎಲ್ಲಾ ಕ್ರಮಗಳ ಬಗ್ಗೆ ಪ್ರಯತ್ನಿಸಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ರೈತರು ಭಯಭೀತರಾಗುವ ಅಗತ್ಯವಿಲ್ಲ ಎಂದು ಕಾಗೇರಿ ಹೇಳಿದ್ದಾರೆ

ಇದಲ್ಲದೆ ದೇಶದಲ್ಲಿಯೇ ಕರ್ನಾಟಕವು ಅತಿಹೆಚ್ಚು ಅಡಿಕೆ ಬೆಳೆಯುವ ರಾಜ್ಯವಾಗಿದ್ದು, ಆದಕಾರಣ ರಾಜ್ಯ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮುಖ್ಯಮಂತ್ರಿಗಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.

ಇದನ್ನು ಓದಿ : ಡಿಸೆಂಬರ್ 9 ರಿಂದ ಚಳಿಗಾಲದ ಅಧಿವೇಶನ

ATM ಕಾರ್ಡ್ ವಂಚಕನ ಬಂಧನ

ಮುರ್ಡೇಶ್ವರದಲ್ಲಿ ವಿಶ್ವ ಮೀನುಗಾರಿಕಾ ದಿನಾಚರಣೆ

ನಕ್ಸಲ್ ನಾಯಕನ ಎನ್ಕೌಂಟರ್