ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ದಾಂಡೇಲಿ(Dandeli): ಗಾಂಧಿನಗರದಲ್ಲಿ ಪತ್ತೆಯಾಗಿದ್ದ ನಕಲಿ ನೋಟಿನ ವಾರಸುದಾರನನ್ನ ಬಂಧಿಸುವಲ್ಲಿ (Arrest) ದಾಂಡೇಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅರ್ಷದ್ ಅಜುಂ ಖಾನ್ (36) ಎಂಬಾತನನ್ನ ಉತ್ತರಪ್ರದೇಶದ (Uttarapradesh) ಲಕ್ನೋದಲ್ಲಿ(Laknow) ಬಂಧಿಸಿ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಏಪ್ರಿಲ್ ಎಂಟರಂದು ಗಾಂಧಿನಗರದ (Gandhinagar) ಮನೆಯೊಂದರಲ್ಲಿ 12 ಕೋಟಿ ರು. ಗೂ ಹೆಚ್ಚಿನ ಮೌಲ್ಯದ ರೂ.500/- ಮುಖ ಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದವು. ಸಂಬಂಧಪಟ್ಟ ಅರ್ಷದ್ ಅಜುಂ ಖಾನ್ ತಲೆಮರೆಸಿಕೊಂಡಿದ್ದನು.
ದಾಂಡೇಲಿ ಅಪರಾಧ ವಿಭಾಗದ(Dandeli Crime Division) ಪಿಎಸ್ಐ ಕಿರಣ್ ಪಾಟೀಲ್ ಹಾಗೂ ಹಳಿಯಾಳ ಅಪರಾಧ ವಿಭಾಗದ ಪಿಎಸ್ಐ ಕೃಷ್ಣ ಅರಕೇರಿ ಹಾಗೂ ಸಿಬ್ಬಂದಿಗಳು ಈತನ ಬಂಧನಕ್ಕೆ ಬಲೆ ಬೀಸಿದ್ದರು. ಮೊಬೈಲ್ ಟವರ್ ಲೋಕೇಶನ್ ಹಾಗೂ ಆತನ ಹಿಂದಿನ ಇನ್ನಿತರೆ ವ್ಯವಹಾರದ ಆಧಾರದಲ್ಲಿ ಪೊಲೀಸ್ ಅಧಿಕಾರಿಗಳು ಉತ್ತರ ಪ್ರದೇಶದ ಲಖ್ನೋದವರೆಗೆ ತೆರಳಿ ಆತನ ಹುಡುಕಾಟ ನಡೆಸಿದ್ದರು. ಪೊಲೀಸರ ಆಗಮನದ ಸುಳಿವು ಪಡೆದಿದ್ದ ಆರೋಪಿ ಅರ್ಷದ್ ಖಾನ್ ತಪ್ಪಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಸಿದ್ದ ಎನ್ನಲಾಗಿದೆ. ಆದರೆ ಪೊಲೀಸರು ಬೀಸಿದ ಬಲೆಗೆ ಆತ ಬಿದ್ದಿದ್ದಾನೆ.
ಗುರುವಾರ ಆತನನ್ನ ದಾಂಡೇಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈತ ಇಷ್ಟೊಂದು ಪ್ರಮಾಣದಲ್ಲಿ ನಕಲಿ ನೋಟುಗಳನ್ನು ದಾಸ್ತಾನು ಇಟ್ಟಿದ್ದು ಯಾಕೆ ? ಹಿಂದಿರುವ ಉದ್ದೇಶವೇನು ಹಾಗೂ ದಾಂಡೇಲಿಗೆ ಬಂದು ಬಾಡಿಗೆ ಮನೆಯಲ್ಲಿ ಉಳಿದುಕೊಂಡಿರುವ ಉದ್ದೇಶವೇನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್, ಡಿವೈಎಸ್ಪಿ ಶಿವಾನಂದ ಮಧರಖಂಡಿ, ಸಿಪಿಐ ಜೈಪಾಲ್ ಪಾಟೀಲ್ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಅಮೀನ್ ಅತ್ತಾರ , ಕಿರಣ್ ಪಾಟೀಲ್ ಹಾಗೂ ಕೃಷ್ಣ ಅರಕೇರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನು ಓದಿ : ಜಾನುವಾರುಗಳ ಅಕ್ರಮ ಸಾಗಾಟ ಪತ್ತೆ ಹಚ್ಚಿದ ಪೊಲೀಸರು. ಭಟ್ಕಳಕ್ಕೆ ಸಾಗಿಸುತ್ತಿದ್ದ ವೇಳೆ ದಾಳಿ.
ರಾಷ್ಟ್ರೀಯ ಮೀನುಗಾರ ಕಾರ್ಮಿಕ ವೇದಿಕೆಯಿಂದ ಲೋಕಸಭೆ ಅಧಿವೇಶನದ ವೇಳೆ ಪ್ರತಿಭಟನೆ ಎಚ್ಚರಿಕೆ.