ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar): ಗರ್ಭಧರಿಸಿದ ಗೋ ಹತ್ಯೆ ಮಾಡಿದ ಪ್ರಕರಣವನ್ನ ಭೇದಿಸುವಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸರ ತಂಡ ಯಶಸ್ವಿಯಾಗಿದೆ.
ಪ್ರಕರಣದ ಪ್ರಮುಖ ಆರೋಪಿ ವಾಸಿಮ್ ಮತ್ತು ಮುಜಾಮಿಲ್ ಎಂಬುವವರಿಗೆ ಹೆಡೆ ಮುರಿ ಕಟ್ಟಲು ಪೊಲೀಸರು ಸಫಲರಾಗಿದ್ದಾರೆ. ಹೊನ್ನಾವರ ತಾಲೂಕಿನ ಕೊಂಡಕುಳಿ ಗ್ರಾಮದಲ್ಲಿ ನಡೆದಿದ್ದ ಗರ್ಭ ಧರಿಸಿದ್ದ ಹಸುವಿನ ಹತ್ಯೆ ಪ್ರಕರಣ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಪ್ರಕರಣದ ಆರೋಪಿಗಳನ್ನ ಬಂಧಿಸುವಂತೆ ಎಲ್ಲೆಡೆ ಹೋರಾಟಗಳು ನಡೆದಿತ್ತು.
ಜನವರಿ 19ರಂದು ಕೊಂಡಕುಳಿ ಗ್ರಾಮದಲ್ಲಿ ಮೇಯಲು ಹೋಗಿದ್ದ ಹಸುವನ್ನ ಹತ್ಯೆಗೈದು ಆರೋಪಿ ಗಳು ಪರಾರಿಯಾಗಿದ್ದರು. ಸಹಕಾರ ಕೊಟ್ಟಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಹಿಂದೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಫೈಜಾನ್ ಎನ್ನುವ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು.
ಪ್ರಮುಖ ಆರೋಪಿಗಳಾದ ವಾಸೀಂ ಹಾಗೂ ಮುಜಾಮಿಲ್ ಬೈಕ್ ಮೂಲಕ ಧಾರವಾಡಕ್ಕೆ ತೆರಳಿ ರೈಲ್ವೆ ನಿಲ್ದಾಣದಲ್ಲಿ ಬೈಕ್ ಬಿಸಾಕಿ ಅಲ್ಲಿಂದ ಮುಂಬೈ ಕಡೆ ಎಸ್ಕೇಪ್ ಆಗಿದ್ದರು. ಕೋಮು ಪ್ರಚೋದನೆಗೆ ಅವಕಾಶ ಆಗಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ ನಾರಾಯಣ್ ಗಂಭೀರವಾಗಿ ತೆಗೆದುಕೊಂಡು ಜಿಲ್ಲಾ ಪೊಲೀಸರ ನಾಲ್ಕು ವಿಶೇಷ ತಂಡವನ್ನ ಸಹ ರಚಿಸಿದ್ದರು.
ಒಟ್ಟು 45 ದಿನಗಳ ಕಾಲ ಐದು ರಾಜ್ಯಗಳಲ್ಲಿ ತನಿಖೆ ನಡೆಸಿ ಒಟ್ಟಾರೆ 11ವರೆ ಸಾವಿರ ಕಿಲೋಮೀಟರ್ ಕ್ರಮಿಸಿ ನೂರಾರು ಸಿಸಿಟಿವಿ ಪರಿಶೀಲಿಸಿ ತನಿಖೆ ನಡೆಸಲಾಗಿತ್ತು.
ಆರೋಪಿಗಳ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆಯಾಗಿತ್ತು. ಮುಂಬೈ ರೈಲ್ವೆ ನಿಲ್ದಾಣದಲ್ಲಿ ಗೌಪ್ಯ ಮಾಹಿತಿ ನೀಡಿದ ವ್ಯಕ್ತಿಯಿಂದ ಪ್ರಮುಖ ಆರೋಪಿಯಾಗಿದ್ದ ವಾಸೀಂ ನನ್ನ ಮುಂಬೈನ ಶಕೀಬ್ ಬಜಾರ್ ಬಳಿ ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಮುಜಾಮಿಲ್ ಎನ್ನುವಾತನನ್ನ ಭಟ್ಕಳದಲ್ಲಿ ಬಂಧಿಸಲಾಗಿದೆ
ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಹೊನ್ನಾವರ ಗೋ ಹತ್ಯೆ ಪ್ರಕರಣ ಭೇದಿಸುವಲ್ಲಿ ಜಿಲ್ಲಾ ಪೊಲೀಸ್ ರ ವಿಶೇಷ ತಂಡ ಯಶಸ್ವಿಯಾಗಿದೆ. ಆರೋಪಿ ಪತ್ತೆಗೆ ಶ್ರಮಿಸಿದ ಪೊಲೀಸರು ಮತ್ತು ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವಾರಿಷ್ಟಾಧಿಕಾರಿ ಎಂ ನಾರಾಯಣ್ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನು ಓದಿ : ಮದುವೆಯ ಮೊದಲ ರಾತ್ರಿ ವಧು ವರರ ಸಾವು.
ನಾಟಕದಲ್ಲಿ ನಡೀತು ರಿಯಲ್ ಘಟನೆ. ಮಗನ ಬಡವನ ಪಾತ್ರಕ್ಕೆ ವೇದಿಕೆಯಲ್ಲಿಯೇ ಗೋಳೋ ಎಂದ ತಂದೆ.
ಭಟ್ಕಳದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ. ಪೊಲೀಸರ ಕಾರ್ಯಾಚರಣೆ.