ಬೈಂದೂರು : ಉಪ್ಪುಂದ ಗ್ರಾಮದ ಕರ್ಕಿಕಳಿ ಎಡಮಾವಿ ಹೊಳೆ ಸಮೀಪದ ದಡದಲ್ಲಿದ್ದ ದೋಣಿಯ ಹಿತ್ತಾಳೆ ರಿಂಗ್ ಕದ್ದ ಆರೋಪಿಯನ್ನ ಬೈಂದೂರು ಪೊಲೀಸರು ಬಂಧಿಸಿದ್ದಾರೆ.
ಉಪ್ಪುಂದದ ಮಹೇಶ್ ಖಾರ್ವಿ (30 ಬಂಧಿತ ಆರೋಪಿ.
ಬಂಧಿತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ 95 ಹಿತ್ತಾಳೆ ರಿಂಗ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಾರ್ಚ್ 16ರಂದು ಶ್ರೀನಿವಾಸ ಖಾರ್ವಿ ಅವರ ಶ್ರೀ ಹಕ್ರೆಮಠ ಯಕ್ಷೇಶ್ವರಿ ಪ್ರಸಾದ ರಾಣಿ ಬಲೆ ದೋಣಿಯ ರೋಪನ್ನು ತುಂಡರಿಸಿ 95 ಹಿತ್ತಾಳೆಯ ರಿಂಗ್ ಗಳನ್ನು ಕದ್ದೋಯ್ಯಲಾಗಿತ್ತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಭಂದಿಸಿದಂತೆ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಅವರ ನಿರ್ದೇಶನದಲ್ಲಿ, ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಸಿಪಿಐ ಸವಿತ್ರ ತೇಜ್ ಮಾರ್ಗದರ್ಶನದಲ್ಲಿ ಪಿಎಸ್ಐ ತಿಮ್ಮೇಶ್ ಬಿ.ಎನ್, ಮಹೇಶ ಕಂಬಿ, ಎಎಸ್ಐ ಸೂರ ನಾಯ್ಕ, ನಾಗಶ್ರೀ,ಅಪರಾಧ ವಿಭಾಗದ ಸಿಬ್ಬಂದಿಗಳಾದ ಸುಜಿತ್ ಕುಮಾರ್, ಮಾಳಪ್ಪ ದೇಸಾಯಿ ತನಿಖೆ ನಡೆಸಿದ್ದರು.