ಪುಣೆ :  ಶ್ರೀ ಶಿವ ಛತ್ರಪತಿ ಶಿವಾಜಿ ಮಹಾರಾಜ ಸ್ಟೇಡಿಯಂನಲ್ಲಿ ನಡೆದ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ.

ದೇಶದ 32 ರಾಜ್ಯಗಳಿಂದ ಕಿಕ್ ಬಾಕ್ಸಿಂಗ್ ಪಟುಗಳು ಭಾಗವಸಿದ್ದರು. ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ನಮ್ಮ  ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಿಕ್ ಬಾಕ್ಸಿಂಗ್ ಪಟುಗಳಾದ   7 ರಿಂದ 9 ವರ್ಷ ವಯೋಮಿತಿಯ ಬಾಲಕಿಯರ 18ಕೆಜಿ ಪಾಯಿಂಟ್ ಪೈಟ್ ವಿಭಾಗದಲ್ಲಿ ಧನ್ವಿತಾ ವಾಸು ಮೊಗೇರ ಚಿನ್ನದ ಪದಕ ಗಳಿಸಿದ್ದಾಳೆ. 18ಕೆಜಿ ಲೈಟ್ ಕಾಂಟ್ಯಾಕ್ಟ್  ವಿಭಾಗದಲ್ಲಿ ಪ್ರಣವಿ ರಾಮಚಂದ್ರ ಕಿಣಿ ಸಹ ಚಿನ್ನಕ್ಕೆ ಕೊರಳೊಡ್ಡಿದ್ದಾಳೆ. ಕಾರವಾರದ ಅವನಿ ಸೂರಜ್ ರಾವ್ ಮ್ಯೂಸಿಕಲ್ ಫಾರ್ಮ್ ಹಾರ್ಡ್ ಸ್ಟೈಲ್ ನಲ್ಲಿ ಚಿನ್ನ ಗಳಿಸಿದ್ದಾಳೆ.

ಬಾಲಕರ  24ಕೆಜಿ ವಿಭಾಗದ ಪಾಯಿಂಟ್ ಫೈಟ್ ನಲ್ಲಿ ಮೊಹಮ್ಮದ್ ರಯ್ಯಾನ್ ಐದನೇ ಸ್ಥಾನ, 10ರಿಂದ 13 ವರ್ಷ ವಯೋಮಾನದ ಬಾಲಕರ 32ಕೆಜಿ ವಿಭಾಗದಲ್ಲಿ ನಯಿಮ್ ಅಹ್ಮದ್ ಗಂಗಾವಳಿ ಕಂಚಿನ ಪದಕ, 28ಕೆಜಿ ವಿಭಾಗದಲ್ಲಿ ಮೊಹಮ್ಮದ್ ಮುಸ್ತಾಫೀಜ್ ಕೋಲಾ 17ನೇ ಸ್ಥಾನ,  13-15 ವರ್ಷ ವಯೋಮಾನದ 42ಕೆಜಿ ವಿಭಾಗದಲ್ಲಿ ನಿಹಾಲ್ ಹಸನ್ ಸಾದ ಒಂಬತ್ತನೇ ಸ್ಥಾನ,  63ಕೆಜಿ ವಿಭಾಗದಲ್ಲಿ ಮೊಹಮ್ಮದ್ ಸಲಾಹ ಐದನೇ ಸ್ಥಾನ ಪಡೆದಿದ್ದಾರೆ.

ಸಾಧಕ ಪಟುಗಳಿಗೆ ವಾಕೊ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ನ ಅಧ್ಯಕ್ಷ ಸಂತೋಷ ಕೆ ಮತ್ತು ಪ್ರಧಾನ ಕಾರ್ಯದರ್ಶಿ ಪೂಜಾ ಹರ್ಷ ಹಾಗೂ  ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗಿನ ಕೋಚ್ ಗಳಾದ ಹರ್ಷ ಶಂಕರ್,   ಉತ್ತರಕನ್ನಡ ಜಿಲ್ಲೆಯ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಈಶ್ವರ ನಾಯ್ಕ,   ನಾಗಶ್ರೀ ಮಾರ್ಷಲ್ ಆರ್ಟ್ಸ್ ನ ಕಿಕ್ ಬಾಕ್ಸಿಂಗ್ ನ ಕೋಚ್  ನಾಗಶ್ರೀ ನಾಯ್ಕ, ಅಲೈಯನ್ಸ್ ಮಾರ್ಷಲ್ ಆರ್ಟ್ಸ್ ನ ಕೋಚ್ ಇಸ್ಮಾಯಿಲ್, ರೇವೊಲ್ಯೂಷನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಕೋಚ್ ಜುಹೆಬ್, ಅಕ್ಫಾ ಅಕಾಡೆಮಿಯ ಕೋಚ್ ಅಮರ್ ಶಾಬಂದ್ರಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.