ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು (Bangaluru): ಪಕ್ಷ ಮತ್ತು ಮುಖಂಡರ ಬಗ್ಗೆ ಆಗಾಗ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal) ಅವರನ್ನು ಉಚ್ಚಾಟನೆ ಮಾಡಲಾಗಿದೆ.
ಆರು ವರ್ಷಗಳ ಕಾಲ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷ ಕಾಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷದ ಒಳಗಿನ ಸರ್ವಾಧಿಕಾರ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ ಆರು ವರ್ಷ ಉಚ್ಛಾಟನೆ ಮಾಡಿದ್ದಾರೆ. ಪಕ್ಷದ ಒಳಗಿನ ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಅಜೆಂಡಾ ಯಶಸ್ವಿಯಾಗಿ ಸಾಧಿಸಿಕೊಂಡಿವೆ. ಈ ಉಚ್ಛಾಟನೆಯಿಂದ ನಾನು ನನ್ನ ಹೋರಾಟ ನಿಲ್ಲಿಸಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಹಾಗೂ ಹಿಂದುತ್ವ ಮತ್ತು ಉತ್ತರ ಕರ್ನಾಟಕ ಪರ ನನ್ನ ಹೋರಾಟ ನಿರಂತರವಾಗಿರುತ್ತೆ ಎಂದಿದ್ದಾರೆ.
ಈಗಾಗಲೇ ಬಿಜೆಪಿ ಶಿಸ್ತು ಸಮಿತಿಯಿಂದ ಭಿನ್ನಮತೀಯ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ, ಯತ್ನಾಳ ಬಣದ ಶಾಸಕ ಬಿ.ಪಿ.ಹರೀಶ್ ಹಾಗೂ ವಿಜಯೇಂದ್ರ ಬಣದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಎಂ.ಪಿ.ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟೀಸ್ ನೀಡಲಾಗಿದ್ದು ಮುಂದೆ ಪಕ್ಷದಲ್ಲಿ ಯಾವ ಬೆಳವಣಿಗೆ ನಡೆಯಲಿದೆ ಕಾದು ನೋಡಬೇಕಾಗಿದೆ.
ಇದನ್ನು ಓದಿ: ಕಾರವಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹೈ ವೋಲ್ಟೇಜ್ ಮೀಟಿಂಗ್.
ಗೋವಾ ಮೂಲಕ ಗೋಕರ್ಣಕ್ಕೆ ಆಗಮಿಸಿದ ಸಚಿವ ಪರಮೇಶ್ವರ್. ವಿಶೇಷ ಪೂಜೆ.
ಇನ್ನೂ ಕೆಲದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ