ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ನವದೆಹಲಿ (Newdelhi) : ರಾಷ್ಟ್ರ ರಾಜಧಾನಿಯ ಗದ್ದುಗೆಯನ್ನ ಹಿಡಿಯಲು ಬಿಜೆಪಿ ಯಶಸ್ವಿಯಾಗಿದೆ. ಫೆಬ್ರವರಿ ಐದರಂದು ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ.
27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದೆ. ಕಳೆದ ದಶಕಗಳಿಂದ ಅಧಿಕಾರದಲ್ಲಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರಿಗೆ ಸೋಲಿನ ರುಚಿ ಉಣಿಸಲಾಗಿದೆ.
2025ರ ಈ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 47 ಸ್ಥಾನಗಳಲ್ಲಿ ಬಿಜೆಪಿ 23 ಸ್ಥಾನಕ್ಕೆ ಆಪ್ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. 2020ರ ವಿಧಾನಸಭಾ ಚುನಾವಣೆಯಲ್ಲಿ ಒಂದಂಕಿ ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಭರ್ಜರಿ ಯಶಸ್ಸಿನ ಮೂಲಕ ಜಿಗಿದು ಬಂದಿದೆ
ಒಟ್ಟು 699 ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. 70 ಸದಸ್ಯರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಶೇ. 60.54 ರಷ್ಟು ಮತದಾನವಾಗಿತ್ತು. ಆದರೆ ಒಂದೇ ಒಂದು ಒಂದು ಸ್ಥಾನದಲ್ಲಿಯೂ ಮುನ್ನಡೆ ಸಾಧಿಸುವಲ್ಲಿ ವಿಫಲವಾದ ಕಾಂಗ್ರೆಸ್ ಸತತ ಮೂರನೇ ಬಾರಿಗೆ ಶೂನ್ಯ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.
ಇದನ್ನು ಓದಿ : ರಸ್ತೆಯಲ್ಲಿ ನಿಂತು ದರೋಡೆಗೆ ಇಳಿದ ಗ್ಯಾಂಗ್ ಆರೆಸ್ಟ್.
ಕಳ್ಳಾಟದಿಂದ ಇಲಾಖೆ ಮರ್ಯಾದೆ ಕಳೆಯುತ್ತಿದ್ದ ಪೊಲೀಸ್ ಸಸ್ಪೆಂಡ್.
ಚಾಲಕನ ನಿಯಂತ್ರಣ ತಪ್ಪಿ ಟೈಲರ್, ಬಟ್ಟೆ ಅಂಗಡಿಗೆ ನುಗ್ಗಿದ ಲಾರಿ