ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಯಲ್ಲಾಪುರ (Yallapura): ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ (BJP Janakrosha Yaatre) ನಡೆಸುವ ಮೂಲಕ ರಾಜ್ಯ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್(Shivaram Hebbar) ವಿರುದ್ಧ ರಣ ತಂತ್ರ ರೂಪಿಸಿದೆ.

ಶುಕ್ರವಾರ ಯಲ್ಲಾಪುರ ಪಟ್ಟಣದಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ (B Y Vijayendra) ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ನಡೆಯಿತು. ಗ್ರಾಮದೇವಿಗೆ(Gramadevi) ಪೂಜೆ ಸಲ್ಲಿಸಿ  ಯಾತ್ರೆಗೆ ಚಾಲನೆ ನೀಡಲಾಯಿತು.

ವೈಟಿಎಸ್ಎಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ   ಬಿ ವೈ ವಿಜಯೇಂದ್ರ ರಾಜ್ಯ ಕಾಂಗ್ರೆಸ್ ಸರ್ಕಾರದ(Congres Government) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಲ್ಲಾಪುರ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸುತ್ತೇವೆಂದು ಮುಖಂಡರು ಚಾಲೆಂಜ್ ಮಾಡಿದ್ದಾರೆ.

ಅದೇ ರೀತಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ(Roopali Naik) ಸಹ ಹೆಬ್ಬಾರ ವಿರುದ್ಧ ಗುಡುಗಿದರು. ಮುಂದಿನ ದಿನಗಳಲ್ಲಿ ಯಲ್ಲಾಪುರ ಸೇರಿ ಉತ್ತರಕನ್ನಡ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರಗಳನ್ನ ಬಿಜೆಪಿ ವಶಪಡಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಕೆಲ ತಿಂಗಳಿಂದ ಶಾಸಕ ಶಿವರಾಮ್ ಹೆಬ್ಬಾರ್ ಪಕ್ಷದಿಂದ ದೂರವಾಗಿದ್ದಾರೆ. ಬಿಜೆಪಿಯ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ. ಪಕ್ಷದಲ್ಲಿ ಅಶಿಸ್ತು ತೋರಿಸಿದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು. ಇದಕ್ಕೆ ಶಿವರಾಮ ಹೆಬ್ಬಾರ್ ಉತ್ತರ ನೀಡಿದ್ದಾರೆ. ವರ್ಷದ ಹಿಂದೆ ನಡೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮಗನನ್ನ ಕಾಂಗ್ರೆಸ್ ಸೇರಿಸಿದ್ದರಿಂದ ಬಿಜೆಪಿ ಮುಖಂಡರ ಅಸಮಧಾನಕ್ಕೆ ಕಾರಣವಾಗಿತ್ತು. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಠಕ್ಕರ್ ನೀಡಲು ಬಿಜೆಪಿ ಯೋಜಿಸಿದೆ.
ಈ ಹಿನ್ನೆಲೆಯಲ್ಲಿ ಯಲ್ಲಾಪುರದಲ್ಲಿ ಜನಾಕ್ರೋಶ ಯಾತ್ರೆ ನಡೆಯಿತು.

ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ಮುಖಂಡರಾದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ಮಾಜಿ ಅಧ್ಯಕ್ಷ. ನಳಿನಕುಮಾರ್ ಕಟೀಲ್,  ಮುಖಂಡರಾದ ಬಿ ಎನ್ ರವಿಕುಮಾರ್,  ಶಿವಾನಂದ ನಾಯ್ಕ, ಸುನೀಲ್ ಹೆಗಡೆ, ಸುನೀಲ್ ನಾಯ್ಕ, ಹರೀಶ್ ಪೂಂಜಾ ಸೇರಿದಂತೆ ಇತರರು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನು ಓದಿ : ಕಾರವಾರದ ಯೋಧ ಹೃದಯಘಾತದಿಂದ ನಿಧನ.  ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು, ನಾಗರಿಕರು.

ಭಟ್ಕಳದಲ್ಲಿ ಹೆದ್ದಾರಿ ತಡೆ, ಠಾಣೆಗೆ ಮುತ್ತಿಗೆ ಹಾಕಿದವರ ಮೇಲೆ ದಾಖಲಾಯ್ತು ಪ್ರಕರಣ.