ಬೈಂದೂರು:  ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರೂರು ಗ್ರಾಮದ ಮೇಲ್ಪಂಕ್ತಿ ಬಳಿ ನಡೆದಿದೆ.

ನಿತಿನ್ ಆಚಾರಿ(16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ನಿತಿನ್ ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದ. ಸೋಮವಾರ ವರ್ಗಾವಣೆ ಪಡೆಯಲು ಶಾಲೆಗೆ ಹೋದಾಗ ಶಿಕ್ಷಕರು ಬೈದಿದ್ದಾರೆಂದು ಹೇಳಲಾಗುತ್ತಿದೆ.

ತನಗೆ ಬೇಕಾದ ವರ್ಗಾವಣೆ ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ