ಅಂಕೋಲಾ(Ankola) : ಕಾರೊಂದು ನಿಯಂತ್ರಣ ತಪ್ಪಿ(Car Overturn) ಪಲ್ಟಿಯಾದ ಘಟನೆ ಅಂಕೋಲಾ (Ankola) ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ 66(NH 66) ಬೊಳೆಯ ಜಮಗೋಡ(Jamagodu) ಬಳಿ ಸಂಭವಿಸಿದೆ.
ಮುಂಬೈ ಅಂದೇರಿಯ(Mumbai andheri) ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಅವರ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಮೃತ ದುರ್ದೈವಿಗಳಾಗಿದ್ದಾರೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಗಾಯಗೊಂಡವರು. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಸ್ವರೂಪ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ(Karwar Civil Hospital) ಸಾಗಿಸಲಾಗಿದೆ.
ನಾಗೇಂದ್ರ ಸದಾಶಿವ ಭಟ್ಕಳ ಅವರ ಕುಟುಂಬದವರು ಮಂಗಳೂರಿನಿ0ದ ಅಂಕೋಲಾದ ಶ್ರೀ ಲಕ್ಷ್ಮೀ ನಾರಾಯಣ ಮಹಾಮಾಯ ದೇವಸ್ಥಾನಕ್ಕೆ ಶನಿ ಶಾಂತಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲು ಆಗಮಿಸಿದ್ದರು. ಕಳೆದ ಮೂರು ದಿನಗಳಿಂದ ತಂಗಿದ್ದರು. ಭಾನುವಾರ ಎಲ್ಲ ಧಾರ್ಮಿಕ ಕಾರ್ಯಕ್ರಮ ಮುಗಿಸಿ ವಾಪಸ್ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದೇವಸ್ಥಾನದಿಂದ ಹೊರಟ ಕೇವಲ 2 ಕೀಮಿ ಅಂತರದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.
ಅಪಘಾತದಿಂದ ನುಜ್ಜುಗುಜ್ಜಾದ ಕಾರಿನಲ್ಲಿ ಐವರು ಸಿಲುಕಿ ಹಾಕಿಕೊಂಡಿದ್ದರು. ಕೂಡಲೆ ಬೊಳೆ ಗ್ರಾಮಸ್ಥರು(Bole Villagers) ಕಾರಿನಲ್ಲಿದ್ದರನ್ನು ಹೊರ ತೆಗೆದು ಚಿಕಿತ್ಸೆಗಾಗಿ ಅಂಕೋಲಾದ ಆಸ್ಪತ್ರೆ ಸಾಗಿಸಿದ್ದಾರೆ. ಸಿಪಿಐ ಚಂದ್ರಶೇಖರ ಮಠಪತಿ ಹಾಗೂ ಪಿಎಸೈ ಸುನೀಲ ಹುಲ್ಲೋಳ್ಳಿ ಸ್ಥಳಕ್ಕಾಗಿಸಿ ಪ್ರಕರಣದ ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ(Ankola Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನು ಓದಿ : ಡೊಂಕನಾಳ ಬಳಿ ಅಪಘಾತ. ಇಬ್ಬರ ಧಾರುಣ ಸಾವು
ಬಿಗ್ ಬಾಸ್ ವೀಕ್ಷಕರಿಗೆ ಶಾಕ್. ಫೈರ್ಬ್ರಾಂಡ್ ಚೈತ್ರಾ ಕುಂದಾಪುರ ಔಟ್.
ಗ್ರಾಮಸ್ಥರ ಪ್ರತಿಭಟನೆಗೆ ಬೆಂಡಾದ ಗ್ರಾಸಿಮ್ ಕಂಪನಿ ಅಧಿಕಾರಿಗಳು. ಕಾರ್ಖಾನೆ ತಾತ್ಕಾಲಿಕ ಬಂದ್.