ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ  ಜಾನುವಾರುಗಳನ್ನು (Cattles) ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜಾನುವಾರುಗಳನ್ನು ರಕ್ಷಿಸಲಾಗಿದೆ(Cattles Rescue). ಲಾರಿ ಸಹಿತ ಓರ್ವನನ್ನು ಬಂಧಿಸಲಾಗಿದೆ. ಈ ಸಂದರ್ಭದಲ್ಲಿ ಮೂವರು ಪರಾರಿಯಾಗಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್‌ ನ ಜಮೀಲ್ ಯೂಸುಫ್‌ ಶೇಖ್ (49)  ಬಂಧಿತ ಆರೋಪಿಯಾಗಿದ್ದಾನೆ. ಸೋಮವಾರ ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್(Shirali Checkpost) ಬಳಿ ಲಾರಿ ತಡೆದು ಪರಿಶೀಲಿಸಿದಾಗ  ಒಂಬತ್ತು ಎತ್ತು ಮತ್ತು  ನಾಲ್ಕು ಕೋಣಗಳನ್ನ ಸಾಗಿಸುತ್ತಿರುವುದು ಗೊತ್ತಾಗಿದೆ.   ಮಹಾರಾಷ್ಟ್ರದ ಪಾಲೆಗಾಂವ್‌ನಿಂದ ಭಟ್ಕಳಕ್ಕೆ ಸಾಗಾಟ ಆಗುತ್ತಿತ್ತು ಎನ್ನಲಾಗಿದೆ. ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲಾತಿಗಳು ಸಿಕ್ಕಿಲ್ಲ. ಇವುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದಾರೆ.

ಹಿಂದು ಜಾಗರಣಾ ವೇದಿಕೆ  ಮತ್ತು ಬಿಜೆಪಿ  ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ ಕೆ. ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಪಿಎಸ್ ಐ ರನ್ನ ಗೌಡ ಪಾಟೀಲ ಮತ್ತು ಭರಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್‌ಐ ಕೃಷ್ಣಾನಂದ ನಾಯ್ಕ, ಪಿಸಿ ಬಸವರಾಜ ಡಿ.ಕೆ., ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ.ಪಿ., ಅಂಬರೀಶ ಕುಂಬಾರಿ, ಕಿರಣ ತಿಳಗಂಜಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಹಿಂದು ಜಾಗರಣಾ ವೇದಿಕೆ ಸಹ ಸಂಚಾಲಕ ನಾಗೇಶ ನಾಯ್ಕ ಹೊನ್ನೆಗದ್ದೆ, ಕುಮಾರ ನಾಯ್ಕ ಹನುಮಾನನಗರ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ, ಲೋಕೇಶ ದೇವಾಡಿಗ ಪೊಲೀಸರಿಗೆ ಸಹಕರಿಸಿದ್ದರು.

ಇದನ್ನು ಓದಿ: ತೂಕ ಇಳಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ.

ಕುಂಭ ಮೇಳದಲ್ಲಿ 30 ಕೋಟಿ ಗಳಿಸಿದ ನಾವಿಕ ಕುಟುಂಬಕ್ಕೆ ಟ್ಯಾಕ್ಸ್ ಸಂಕಷ್ಟ.

ಚಾಂಪಿಯನ್ಸ್ ಟ್ರೋಫಿ ಭಾರತದ ಮುಡಿಗೆ. ಭಟ್ಕಳದಲ್ಲಿ ವಿಜಯೋತ್ಸವ ವೇಳೆ ಅಭಿಮಾನಿಗಳನ್ನ ನಿಯಂತ್ರಿಸಲು ಹರಸಾಹಸ.

ಕಣ ಕಣದಲ್ಲಿ ಕೇಸರಿ. ಮೂವರು ನಟರಿಗೆ ಸಂಕಷ್ಟ