ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ನವದೆಹಲಿ(Newdelhi): ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ತಮ್ಮ ವೀಸಾದ ಮಾನ್ಯತೆಯ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯಬೇಕೆಂದು ಕೇಂದ್ರ ಸರ್ಕಾರ (Central Government) ಸೂಚನೆ ನೀಡಿದೆ.
ಪಾಕಿಸ್ತಾನಿ (Pakistan) ಪ್ರಜೆಗಳಿಗೆ ನೀಡಿರುವ ಎಲ್ಲಾ ವೀಸಾ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಏಪ್ರಿಲ್ 27ರೊಳಗೆ ಭಾರತವನ್ನು ತೊರೆಯುವಂತೆ ಸೂಚಿಸಿದೆ. ಬುಧವಾರ ನಡೆದ ಭದ್ರತಾ ಸಂಪುಟ ಸಮಿತಿಯ (CCS) ನಿರ್ಣಯದ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳನ್ನು ಏಪ್ರಿಲ್ 27 ರಿಂದ ರದ್ದುಗೊಳಿಸಲಾಗುವುದು ಎಂದು ತಿಳಿಸಲಾಗಿದೆ.
ಪಹಲ್ಗಾಮ್(Pahalgam) ಉಗ್ರ ದಾಳಿಯ(Terror Attack) ಹಿನ್ನೆಲೆಯಲ್ಲಿ ಭಾರತ ಸರ್ಕಾರ(India Government) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನಿ ನಾಗರಿಕರಿಗೆ ಈಗಾಗಲೇ ನೀಡಲಾದ ಎಲ್ಲಾ ವೀಸಾ(Visa) ಸೇವೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಪಾಕ್ ನಾಗರೀಕರಿಗೆ ನೀಡಿದ ವೀಸಾಗಳನ್ನು ಏಪ್ರಿಲ್ 27ರಿಂದ ರದ್ದು ಮಾಡಲಾಗುವುದು. ಪಾಕಿಸ್ತಾನಿ(Pakistani) ನಾಗರಿಕರಿಗೆ ನೀಡಲಾದ ವೈದ್ಯಕೀಯ ವೀಸಾಗಳು ಕೇವಲ ಏಪ್ರಿಲ್ 29ರವರೆಗೆ ಮಾತ್ರ ಮಾನ್ಯವಾಗಿರಲಿದೆ.
ಹೀಗಾಗಿ ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ತಮ್ಮ ವೀಸಾದ ಮಾನ್ಯತೆಯ ಅವಧಿ ಮುಗಿಯುವ ಮೊದಲು ದೇಶ ಬಿಟ್ಟು ನಡೆಯುವಂತೆ ತಿಳಿಸಲಾಗಿದೆ. ಅದೇ ರೀತಿ ಭಾರತೀಯ ನಾಗರಿಕರು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ.
ಪಾಕಿಸ್ತಾನದಲ್ಲಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಭಾರತಕ್ಕೆ ಮರಳಲು ಸೂಚನೆ ನೀಡಲಾಗಿದೆ. ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸುವುದು ಬೇಡ ಎಂದು ಸಚಿವಾಲಯವು ಭಾರತೀಯ ಪ್ರಜೆಗಳನ್ನ ಆಗ್ರಹಿಸಿದೆ.
ಇದನ್ನು ಓದಿ : ಕಾರವಾರ ಹತ್ಯೆ ಪ್ರಕರಣ. ನಿರ್ಲಕ್ಷ್ಯ ವಹಿಸಿದ್ದಕ್ಕೆ ನಾಲ್ವರು ಪೊಲೀಸರ ಅಮಾನತು?
ಜಾಹೀರಾತು ನೋಡಿ ಸೀರೆ ಬುಕ್ ಮಾಡಿದ್ರು. ಕಂಪನಿಯ ಮೋಸ ಎಂದು ದೂರು ದಾಖಲು.