ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಭಟ್ಕಳ(Bhatkal): ಹೊನ್ನಾವರ-ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ಗೋ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿರುವುದಕ್ಕೆ  ಸಾಮಾಜಿಕ ಹೋರಾಟಗಾರ ಮಾಸ್ತಪ್ಪ ನಾಯ್ಕ ಬಲ್ಸೆ  ಖಂಡಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಭಟ್ಕಳದ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕುಕನೀರ ಗ್ರಾಮದಲ್ಲಿ ಗರ್ಭಿಣಿ ಹಸುವನ್ನು ಕೊಂದು ಕರುವನ್ನು ಬಿಸಾಡಿ ವಿಕೃತಿ ಮೇರೆದ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿತರನ್ನು ಬಂಧಿಸುವ ಮೂಲಕ ಉತ್ತಮ ಕಾರ್ಯ ಮಾಡಿದ್ದಾರೆ. ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತಿದ್ದೇವೆ.

ಹಿಂದು ಜಾಗರಣಾ ವೇದಿಕೆ ಹಾಗೂ ಭಜರಂಗದಳದ ಕಾರ್ಯಕರ್ತರು ಜೀವದ ಹಂಗು ತೊರೆದು ಹಗಲು-ರಾತ್ರಿ ಗೋ ಮಾತೆಯ ರಕ್ಷಣೆಗಾಗಿ ನಿರಂತರ ಶ್ರಮ ವಹಿಸುತ್ತಿದ್ದಾರೆ. ಆದರೂ ಗೋ ಹತ್ಯೆಯಂತ ಹೀನ ಕೃತ್ಯ ನಡೆಯುತ್ತಿರುವುದು ಸಹಿಸಲು ಸಾದ್ಯವಿಲ್ಲ ಎಂದು ಹೇಳಿದ ಮಾಸ್ತಪ್ಪ ನಾಯ್ಕ. ಇಂತಹ ಕ್ರೂರ, ಅಮಾನುಷ ಗೋ ಮಾತೆಯ ಹತ್ಯೆಯಾಗುವುದನ್ನು ಪೊಲೀಸರು ತಡೆಯಬೇಕು ಎಂದಿದ್ದಾರೆ.

ಇಲ್ಲವಾದಲ್ಲಿ ಹಿಂದೂ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು ಸಿದ್ದರಿದ್ದೇವೆ. ವಿಶೇಷವೆಂದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರವರು ಈ ಹಿಂದೆ ಹೊನ್ನಾವರದ ಕೊಂಡದಕುಳಿಯಲ್ಲಿ ನಡೆದ ಗೋ ಹತ್ಯೆ ಪ್ರಕರಣದಲ್ಲಿ ಹೇಳಿಕೆಯೊಂದನ್ನು ನೀಡಿ ಇನ್ನೂ ಮುಂದೆ ಗೋ ಹತ್ಯೆ ಮಾಡುವವರನ್ನು ಸರ್ಕಲ್‍ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು ಎಂದಿದ್ದರು. ಈ ನಡುವೆ ಮತ್ತೆ ಘಟನೆ ನಡೆದಿರುವುದು ದುರದೃಷ್ಟಕರ ಎಂದು ಮಾಸ್ತಪ್ಪ ನಾಯ್ಕ ಹೇಳಿದ್ದಾರೆ. ಹೀಗಾಗಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನು ಓದಿ : ಸತೀಶ್ ಕೊಳಂಬಕರ್ ಮರ್ಡರ್ ಮಿಸ್ಟ್ರಿ. ಪ್ರಕರಣದಲ್ಲಿ ಮೂವರು ಆರೆಸ್ಟ್.

ಹೀನ ಕೃತ್ಯದ ಹಿಂದಿರುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಪ್ರಧಾನಿ ಮೋದಿ ಗುಡುಗು