ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ತೆಲಂಗಾಣ(Telangana) :  ಹೈದರಬಾದ್ ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಯಾಸಿನ್ ಭಟ್ಕಳ್(Yasin Bhatkal) ಸೇರಿ ಐವರು ಅಪರಾಧಿಗಳಿಗೆ ನೀಡಿದ್ದ ಮರಣದಂಡನೆಯ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್(Telangana Highcourt)  ಎತ್ತಿ ಹಿಡಿದಿದೆ.

ಐವರು ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್‌ನ  ಭಯೋತ್ಪಾದಕರಾಗಿದ್ದಾರೆ. 2013 ರಲ್ಲಿ ಹೈದರಾಬಾದ್ ಬಾಂಬ್ ಸ್ಫೋಟ ಪ್ರಕರಣದಲ್ಲಿ  ಭಾಗಿಯಾಗಿದ್ದರು. ಈ ಸ್ಫೋಟದಲ್ಲಿ 18 ಮಂದಿ ಸಾವನ್ನಪ್ಪಿದ್ದರೆ, 131 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಲಕ್ಷ್ಮಣ್ ಮತ್ತು ಪಿ. ಸುಧಾ ಅವರ ಪೀಠವು, ಐಎಂ ಭಯೋತ್ಪಾದಕರು ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣಾ ಮೇಲ್ಮನವಿಯನ್ನು ವಜಾಗೊಳಿಸಿ, ಎನ್‌ಡಿಎ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ದೃಢಪಡಿಸಲಾಗಿದೆ ಎಂದು ಪೀಠ ತಿಳಿಸಿದೆ.

ಇದರ ಮೊದಲು ಐಎಂ ಸಹ ಸಂಸ್ಥಾಪಕ ಮೊಹಮ್ಮದ್ ಅಹ್ಮದ್ ಸಿದ್ದಿಬಾಪಾ ಅಲಿಯಾಸ್ ಯಾಸಿನ್ ಭಟ್ಕಳ್, ಪಾಕಿಸ್ತಾನಿ ಪ್ರಜೆ ಜಿಯಾ-ಉರ್-ರೆಹಮಾನ್ ಅಲಿಯಾಸ್ ವಕಾಸ್, ಅಸಾದುಲ್ಲಾ ಅಖ್ತರ್ ಅಲಿಯಾಸ್ ಮೊನ್ಜಾ ಹದ್ದಿ ಸೇರಿದಂತೆ ಐವರು ಸದಸ್ಯರನ್ನು ಎನ್‌ಐಎ ನ್ಯಾಯಾಲಯ(NIA Court) ದೋಷಿ ಎಂದು ತೀರ್ಪು ನೀಡಿರುವುದನ್ನು ಗಮನಿಸಬಹುದಾಗಿದೆ.

ಇದನ್ನು ಓದಿ : ಪೊಲೀಸರ ದಾಳಿ. ಮನೆಯೊಳಗೆ ಅಂದರ್ ಬಾಹರ್ ಆಡುತ್ತಿದ್ದವರು ಅಂದರ್.

ಶ್ರೀನಿವಾಸ್ ನಾಯ್ಕ ಮೇಲೆ ಹಲ್ಲೆ ಮಾಡಿಲ್ಲ. ಇದೆಲ್ಲ  ಸುಳ್ಳು ನಾಟಕ. ಎಸ್ಪಿ ನಾರಾಯಣ್ ಹೇಳಿಕೆ.