ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಯಲ್ಲಾಪುರ (Yallapur) : ನಿನ್ನೆ ಹಿಂದು ಮಹಿಳೆಯೋರ್ವಳನ್ನು ಕೊಲೆಗೈದು ಪರಾರಿಯಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಇಂದು ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಬಳಿಕ ಆರೋಪಿ ರಫಿಕ್ ಇಮಾಮಸಾಬ್ ಯಳ್ಳೂರು ಕಾಡಿನಲ್ಲಿ ಪರಾರಿಯಾಗಿದ್ದ. ಇಂದು ನಿಸರ್ಗ ಮನೆ ಹಿಂಬಾಗದ ಕಾಜಲವಾಡ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರವಿವಾರ ಮುಂಜಾನೆ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ.
ಪಟ್ಟಣದಲ್ಲಿ ನಡೆದ ಕೊಲೆ ಪ್ರಕರಣದ ಬಳಿಕ ಯಲ್ಲಾಪುರ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ನಡೆಸಿದ್ದರು. ನಿರಂತರ ಹುಡುಕಾಟದ ನಡುವೆಯೇ ರಫೀಕ್ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ರಫಿಕ್ , ರಂಜಿತಾಗೆ ಟಾರ್ಚರ್ ನೀಡುತ್ತಿದ್ದ. ನಿನ್ನೆ ಮತ್ತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆಗೈದು ಎಸ್ಕೇಪ್ ಆಗಿದ್ದ.
ಘಟನೆಯ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣದಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೊಲೆ ಮತ್ತು ಆತ್ಮಹತ್ಯೆ ಎರಡೂ ಪ್ರಕರಣಗಳ ಕುರಿತು ಯಲ್ಲಾಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ನಡುವೆ ಹಿಂದು ಸಂಘಟನೆ ಕರೆ ನೀಡಿದ ಬಂದ್ ಕರೆಗೆ ಯಲ್ಲಾಪುರ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿದೆ. ಹಿಂದು ಸಂಘಟನೆ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದ ಬಳಿ ಖಂಡನಾ ಸಭೆ ನಡೆಸಿದರು.
ಇದನ್ನು ಓದಿ : ಯಲ್ಲಾಪುರದಲ್ಲಿ ವಿವಾಹಿತ ಮಹಿಳೆ ಹತ್ಯೆ. ಅನ್ಯ ಕೋಮಿನ ಯುವಕನಿಂದ ಕೊಯಾದ ರಂಜಿತಾ.*
