ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ (Karwar): ಬೆಳಗಿನ ವಾಯು ವಿಹಾರಕ್ಕೆ ಹೊರಟಿದ್ದ ನಗರಸಭೆ ಮಾಜಿ ಸದಸ್ಯನನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಸತೀಶ ಕೊಳಂಬಕರ (62) ಕೊಲೆಯಾದ ದುರ್ದೈವಿ. ಬೆಳಿಗ್ಗೆ ಬೈಕ್ ಮೇಲೆ ಬಂದಿದ್ದ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಸತೀಶ ಅವರ ಎದೆಗೆ ಇರಿದು ಹತ್ಯೆ ಮಾಡಿದ್ದಾರೆ. ವ್ಯವಹಾರ ವಿಚಾರದ ದ್ವೇಷದಿಂದ ಸತೀಶ ಅವರನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ.
ಕಾರವಾರ ನಗರ ಠಾಣೆಯಲ್ಲಿ ಸತೀಶ್ ಕೊಳಂಭಕರ್ ವಿರುದ್ಧ 8ಕ್ಕೂ ಹೆಚ್ಚು ಪ್ರಕರಗಳಿದ್ದು ಅವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಲಾಗಿತ್ತು.
ಹತ್ತು ದಿನಗಳ ಹಿಂದೆ ನಗರದ ಹೊಟೆಲ್ ಒಂದರಲ್ಲಿ ಹಣಕಾಸಿನ ವಿಚಾರಕ್ಕೆ ಸತೀಶ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ನಡೆಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ಹತ್ಯೆ ನಡೆಸಿದ ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.