ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara  digital news) :ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡಬೇಕೆಂದು  ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಮೊಟ್ಟೆ ತಿನ್ನುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ಇದನ್ನು ಓದಿ : ಎಸ್ ಎಂ ಕೆ ನಿಧನ. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು  ವಿನೂತನವಾಗಿ ಪ್ರತಿಭಟಿಸಿ, ಬೇಳೆಯ ಜೊತೆ ಮೂಳೆಯು ಇರಲಿ, ಹಪ್ಪಳದ ಜೊತೆ ಕಬಾಬ್ ಇರಲಿ, ಕೋಸಂಬರಿ ಜೊತೆ ಎಗ್ ಬುರ್ಜಿ ಇರಲಿ, ಮುದ್ದೆ ಜೊತೆ  ಬೋಟಿ ಇರಲಿ ಎಂದು ಘೋಷಣೆ ಕೂಗಿ ಮಾಂಸಹಾರಕ್ಕೆ ಒತ್ತಾಯಿಸಿದರು.

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ  ನಡೆಯುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಆದರೆ ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರ ನಿಷೇಧಿಸಿ  ಆಗಮಿಸುವ ಲಕ್ಷಾಂತರ ಜನತೆಗೆ ಸಸ್ಯಾಹಾರ ನೀಡಲು ಮುಂದಾಗಿರುವುದು ಜನರ ಆಹಾರದ ಹಕ್ಕನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಂಸಾಹಾರ ನಿರ್ಬಂಧಿಸುವುದು ಸಾಧುವಲ್ಲ. ಅದರಲ್ಲೂ ಮಂಡ್ಯ ಜಿಲ್ಲೆಯ ಹಬ್ಬ, ಸಂಭ್ರಮ, ಸಮ್ಮೇಳನಗಳು ಮಾಂಸಾಹಾರಿ ಊಟೋಪಚಾರಕ್ಕೆ ಹೆಸರುವಾಸಿಯಾಗಿವೆ. ಅಲ್ಲದೇ ಸಮ್ಮೇಳನದಲ್ಲಿ ಭಾಗವಹಿಸುವ ಬಹುಸಂಖ್ಯಾತರು ಮಾಂಸಾಹಾರಿಗಳೇ ಆಗಿರುವಾಗ ನಿಷೇಧ ಏತಕ್ಕಾಗಿ ಎಂದು ಪ್ರತಿಭಟನಕಾರರು ಪ್ರಶ್ನೆ ಮಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಬೇಡಿಕೆ ಏಕೆ ಎಂದು ಪ್ರಶ್ನಿಸುವುದೇ ಅಸಮಂಜಸವಾಗಿದೆ. ಆಹಾರ ಎಂಬುದು ಆಹಾರವಷ್ಟೇ, ಅದನ್ನು ಸಸ್ಯಾಹಾರ ಮತ್ತು ಮಾಂಸಾಹಾರ ಎಂದು ಬೇರ್ಪಡಿಸಿ ಮಾಂಸಾಹಾರ ಅಧಮ, ಅಪವಿತ್ರ ಎಂಬೆಲ್ಲಾ ಭಾವವನ್ನು ಜನರಲ್ಲಿ ಬಿತ್ತುವ ಕೆಲಸ ದೇಶದಲ್ಲಿ ನಡೆಯುತ್ತಿದೆ. ಈ ಮೂಲಕ ಬಹುಜನರ ಆಹಾರ ಪದ್ಧತಿಗಳನ್ನು ಅಸ್ಪೃಶ್ಯ ಮತ್ತು ಅಕ್ರಮವಾಗಿಸುವ ಪ್ರಯತ್ನಗಳು ಶತಮಾನಗಳಿಂದಲೂ ನಡೆಯುತ್ತಿವೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಂಪರೆಯಲ್ಲಿ 12-13 ಶತಮಾನದ ಚಾಲುಕ್ಯ ಅರಸ ಮೂರನೇ ಸೋಮೇಶ್ವರನು ಬರೆದ ಮಾನಸೋಲ್ಲಾಸ ಕೃತಿಯಲ್ಲಿ ಮಾಂಸಾಹಾರಗಳ ಬಹುದೊಡ್ಡ ಪಟ್ಟಿಯೇ ಇದೆ. ಹೀಗಿರುವಾಗ ಮಾಂಸಾಹಾರ ನಿಷೇಧ ಎಂಬುದು ಅಪಾಯಕಾರಿ ಅಜೆಂಡವಾಗಿದೆ. ನಾಗರಿಕರ ಮೂಲಭೂತ ಅಗತ್ಯವಾದ ಆಹಾರದ ವಿಚಾರದಲ್ಲಿ ಸಮ್ಮೇಳನದ ಆಯೋಜಕರು ತಾರತಮ್ಮ ಮತ್ತು ಕೀಳು ಮನೋಭಾವ ಹೊಂದಿರುವುದು ಪ್ರಜಾಪ್ರಭುತ್ವ ವಿರೋಧಿ ನಿಲುವು ಎಂದು ಕಿಡಿಕಾರಿದ್ದಾರೆ.

ಸಾಹಿತ್ಯ ಸಮ್ಮೇಳನದ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಾಹಾರದ ಮಾರಾಟಕ್ಕೆ ವಿಧಿಸಿರುವ ನಿರ್ಬಂಧ ತೆಗೆದುಹಾಕಿ ಮುಕ್ತ ಅವಕಾಶ ಒದಗಿಸಬೇಕು. ಸಮ್ಮೇಳನದ ಊಟದಲ್ಲಿ ಸಸ್ಯಾಹಾರ ಊಟದ ಜೊತೆಗೆ ಎಲ್ಲರೂ ತಿನ್ನಬಹುದಾದ ಕೋಳಿ ಮಾಂಸ ಮೊಟ್ಟೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸಿದರು.  ಸಮ್ಮೇಳನದಲ್ಲಿ ಮಾಂಸಾಹಾರ ನೀಡದಿದ್ದರೆ ಸಾರ್ವಜನಿಕರಿಂದ ಕೋಳಿ, ಮೊಟ್ಟೆ ಮತ್ತು ಪಡಿತರ ಸಂಗ್ರಹಿಸಿ ಮಾಂಸಾಹಾರ ವಿತರಿಸುವ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇದನ್ನು ಓದಿ : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇನ್ನೂ ನೆನಪು ಮಾತ್ರ.

ಬೈಕ್ ಗೆ ಗ್ಯಾಸ್ ಸಾಗಿಸುವ ವಾಹನ ಡಿಕ್ಕಿ. ಸವಾರ ಮೃತ್ಯು.

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಹೊಂದಾಣಿಕೆ : ಪ್ರಣಾವಾನಂದ ಸ್ವಾಮಿ ಗಂಭೀರ ಆರೋಪ

ಜೋಕಾಲಿ ಆಡುತ್ತಿದ್ದಾಗ ಹಗ್ಗ ಸುತ್ತಿ ಬಾಲಕಿ ಸಾವು.

ಬಸ್ ಸ್ಟೇರಿಂಗ್ ಗೆ ಚಾಲಕರನ್ನ ಕಟ್ಟಿ ರೈತರ ಆಕ್ರೋಶ