*ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಬೆಂಗಳೂರು (Bangaluru) :  ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್(68) (DG, IG Om Prakash) ಅವರನ್ನು​ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

  ಓಂ ಪ್ರಕಾಶ್(Om Prakash) ಅವರನ್ನು​ ಪತ್ನಿ ಪಲ್ಲವಿ ಅವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ  ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪ್ರಾಥಮಿಕ ತನಿಖೆ(Primary Investigation) ಸಂದರ್ಭದಲ್ಲಿ ಎಂಟತ್ತು  ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ  ಎಂದು ತಿಳಿದುಬಂದಿದೆ.  ಓಂ ಪ್ರಕಾಶ್​ ಅವರ ಎದೆ, ಹೊಟ್ಟೆ ಹಾಗೂ ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಇನ್ನು, ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ.  ಪತಿಯ ನರಳಾಟವನ್ನು ಪತ್ನಿ ಪಲ್ಲವಿ ನೋಡುತ್ತಾ ನಿಂತಿದ್ದರು ಎಂಬ ಮಾಹಿತಿ ದೊರೆತಿದೆ. ನಂತರ, ಪತ್ನಿ ಪಲ್ಲವಿಯವರು ಹೆಚ್​ಎಸ್​ಆರ್ ಲೇಔಟ್(HSR Layout) ಪೊಲೀಸರಿಗೆ​ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಪತಿ ಓಂ ಪ್ರಕಾಶ್​ ಮೃತಪಟ್ಟ ಬಳಿಕ, ಪತ್ನಿ ಪಲ್ಲವಿಯವರು ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿಯ ಪತ್ನಿಗೆ ವಿಡಿಯೋ ಕರೆ ಮಾಡಿ, ‘I have Finished monster’ ಅಂತ ಎಂದಿದ್ದರಂತೆ.

ಓಂ ಪ್ರಕಾಶ್ ಅವರ ಕೊಲೆಗೆ ನಿಖರ ಕಾರಣ ಏನು ಎಂಬುದನ್ನ ಪೊಲೀಸರು  ತನಿಖೆ ನಡೆಸುತ್ತಿದ್ದಾರೆ. ಇದು ಆಸ್ತಿ ವಿಚಾರಕ್ಕಾಗಿ ನಡೆದ ಕೊಲೆ ಎಂಬ ಅನುಮಾನವೂ ವ್ಯಕ್ತವಾಗಿದೆ. ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಜೋಯಿಡ ಭಾಗದಲ್ಲಿ ಜಮೀನು ಹೊಂದಿದ್ದಾರೆ.

ಜೋಯಿಡಾದ ನಾಗೋಡ ಮತ್ತು ಗಣೇಶಗುಡಿಯಲ್ಲಿ ಜಮೀನನ್ನ  ಓಂ ಪ್ರಕಾಶ್ ಅವರ ಆಸ್ತಿಯಿದೆ. ತಮ್ಮ ತಂಗಿಯ ಹೆಸರಿಗೆ ಆಸ್ತಿ ಮಾಡಿದ್ದರು ಎಂದು ತಿಳಿದುಬಂದಿದೆ. ತಂಗಿ ಹೆಸರಿನಲ್ಲಿ ಆಸ್ತಿ ಮಾಡಿದ್ದಕ್ಕೆ ಹಲವು ದಿನಗಳಿಂದ ಓಂ ಪ್ರಕಾಶ್​ ಮತ್ತು ಅವರ ಪತ್ನಿ ಪಲ್ಲವಿ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇನ್ನು, ತಂಗಿ ವಿಚಾರವಾಗಿ ಮಾತನಾಡಬೇಡ ಅಂತ ಪತ್ನಿ ಪಲ್ಲವಿ ಅವರಿಗೆ ಓಂಪ್ರಕಾಶ್‌ ಎಚ್ಚರಿಕೆ ನೀಡಿದ್ದರಂತೆ. ಈ ವಿಚಾರಕ್ಕಾಗಿಯೇ ಕೊಲೆ ನಡೆದಿದೆ ಎನ್ನಲಾಗಿದೆ.

ಓಂ ಪ್ರಕಾಶ್ ಅವರಿಗೆ ಸೇರಿದ ಎರಡು ಮನೆ ಬೆಂಗಳೂರಿನಲ್ಲಿ ಇವೆ. ಕಾವೇರಿ ಜಂಕ್ಷನ್​ನ ಪ್ರೆಸ್ಟೀಜ್ ಅಪಾರ್ಟ್ಮೆಂಟ್​ನಲ್ಲಿ ಫ್ಲಾಟ್ ಇದೆ. ಎಚ್ ಎಸ್ ಆರ್. ಲೇಔಟ್​ನ ಐಪಿಎಸ್ ಕ್ವಾಟ್ರಸ್​ನಲ್ಲಿ ಮನೆ ಇದೆ. ಮನೆಯಲ್ಲಿ ಗಲಾಟೆ ಆದಾಗ ಓಂ ಪ್ರಕಾಶ್​ ಅವರು ಪ್ರೆಸ್ಟೀಜ್ ಅಪಾರ್ಟ್ಮೆಂಟ್​ನಲ್ಲಿ ವಾಸಿಸುತ್ತಿದ್ದರು ಎಂಬ ಮಾಹಿತಿಯಿದೆ.

ಮೂರು ದಿನಗಳ ಹಿಂದಷ್ಟೆ ಐಪಿಎಸ್  ಫ್ಯಾಮಿಲಿ ವಾಟ್ಸಾಪ್​ ಗ್ರೂಪ್​ನಲ್ಲಿ ಪತ್ನಿ ಪಲ್ಲವಿಯವರು, “ನನ್ನ ಪತಿ ನನಗೆ, ಮಗಳಿಗೆ ತುಂಬಾ ಚಿತ್ರಹಿಂಸೆ ಕೊಡುತ್ತಿದ್ದಾರೆ. ಮನೆಯಲ್ಲಿ ನನ್ನ ಪತಿ ಗನ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಶೂಟ್ ಮಾಡಿ ಕೊಲೆ ಮಾಡುತ್ತೇನೆ ಎಂದು ಭಯಪಡಿಸುತ್ತಿದ್ದಾರೆ. ಹೀಗಾಗಿ, ಪತಿ ವಿರುದ್ಧ ಸುಮೊಟೋ ಕೇಸ್ ದಾಖಲಿಸುವಂತೆ” ಮೆಸೇಜ್ ಮಾಡಿದ್ದರಂತೆ.

ಈ ನಡುವೆ ಹಿರಿಯ ಪೊಲೀಸ್ ಅಧಿಕಾರಿ ಓಂ ಪ್ರಕಾಶ್ ಅವರ ಹತ್ಯೆಯಾಗಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನು ಓದಿ : ಬೆಳಂಬೆಳಗ್ಗೆ ಕಾರವಾರದಲ್ಲಿ ಡೆಡ್ಲಿ ಅಟ್ಯಾಕ್. ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್.

ಮುರ್ಡೇಶ್ವರದಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ. ಸವಾರ ದುರ್ಮರಣ.