ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಉತ್ತರಪ್ರದೇಶ (Uttarapradesh): ಮದುವೆ ವಾರ ಇರುವ ಮೊದಲೇ ವಧುವಿನ ತಾಯಿಯೊಂದಿಗೆ ವರ ಕಾಲ್ಕಿತ್ತ (Escape) ಘಟನೆ ಉತ್ತರ ಪ್ರದೇಶದ (Uttarapradesh)ಅಲಿಗಢದಲ್ಲಿ ನಡೆದಿದೆ.

ಓಡಿ ಹೋದ ವರ ಮಹಾಶಯ  ತನ್ನ ಭಾವಿ ಅತ್ತೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು.  ಪರಾರಿಯಾಗುವಾಗ ಮುನ್ನ ವಧುವಿನ ತಾಯಿ ತನ್ನ ಮಗಳ ಆಭರಣಗಳು(Ornaments) ಮತ್ತು ಮದುವೆಗಾಗಿ ಉಳಿಸಿದ್ದ ಹಣವನ್ನೂ ತೆಗೆದುಕೊಂಡು ಹೋಗಿದ್ದಾಳೆ ಎಂದು ಗೊತ್ತಾಗಿದೆ.

ಪರಾರಿಯಾದ ಮಹಿಳೆ, ಯುವಕನೊಂದಿಗೆ ತನ್ನ ಮಗಳ ಮದುವೆಯನ್ನು ಮಾಡಿಸಲು ಮುಂದಾಗಿದ್ದಳು. ಮದುವೆಯ ಸಿದ್ಧತೆಗಳ ನೆಪದಲ್ಲಿ ಆತ  ಮನೆಗೆ ಬರುತ್ತಿದ್ದ. ಆದರೆ, ಯಾರಿಗೂ ಇಬ್ಬರ ಬಗ್ಗೆ ಯಾವುದೇ ಸಂಶಯ ಬಂದಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆ ಯುವಕ ಮತ್ತು ಭಾವಿ ಅತ್ತೆಯ ನಡುವೆ ಪ್ರಣಯ ಸಂಬಂಧವೂ ಬೆಳೆಯಿತು. ಈ ಮಧ್ಯೆ ವರನು ತನ್ನ ಭಾವಿ ಅತ್ತೆಗೆ ಮೊಬೈಲ್ ಫೋನ್(Mobile phone) ಉಡುಗೊರೆಯಾಗಿ ನೀಡಿದ್ದನಂತೆ. ಅತ್ತೆ ಅಂದ್ರೆ  ತಾಯಿ ಮತ್ತು ಮಗನ ನಡುವೆ ಇರುವ ಬಾಂಧವ್ಯ ಎಂದು ಎಲ್ಲರೂ ಭಾವಿಸಿದ್ದರು. ಏಪ್ರಿಲ್ 16ರಂದು ತನ್ನ ಮಗಳ ವಿವಾಹ ನಡೆಯಬೇಕಿತ್ತು. ಮದುವೆಗೆ ಎಲ್ಲರನ್ನೂ ಆಹ್ವಾನಿಸಲಾಗಿತ್ತು. ಶಾಪಿಂಗ್‌ಗೆ ಹೋಗುವುದಾಗಿ ಹೇಳಿ ಇಬ್ಬರೂ ಮನೆಯಿಂದ ಹೊರಟಿದ್ದರು. ಓಡಿ ಹೋದ ಅವರಿಬ್ಬರು ಮನೆಗೆ ವಾಪಸ್ ಬರಲೇ ಇಲ್ಲ. ಹೀಗಾಗಿ ವಧುವಿನ ಕುಟುಂಬಸ್ಥರು ಚಿಂತೆಯಲ್ಲಿದ್ದಾರೆ.

ಇಬ್ಬರನ್ನು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅದು ಕೂಡ ಪ್ರಯೋಜನವಾಗಲಿಲ್ಲ. ಅನುಮಾನಗೊಂಡ ಹುಡುಗಿಯ ತಂದೆ, ಬೀರು ಪರಿಶೀಲಿಸಿದಾಗ ಚಿನ್ನ ಮತ್ತು ಹಣ ಕಾಣೆಯಾಗಿರುವುದು ಕಂಡುಬಂದಿದೆ. ಅಲ್ಲಿಗೆ ಇಬ್ಬರು ಓಡಿ ಹೋಗಿದ್ದಾರೆಂಬುದು ಖಚಿತವಾಗಿದೆ. ಈ ವಿಷಯ ಅಲಿಗಡ ಪಟ್ಟಣಾದ್ಯಂತ ಜನ ಮಾತಾಡಿಕೊಳ್ಳುವತಾಗಿದೆ.

ಇದನ್ನು ಓದಿ : ಯಾಸಿನ್ ಭಟ್ಕಳ್ ಸೇರಿ ಐವರಿಗೆ ಮರಣ ದಂಡನೆ ಫಿಕ್ಸ್. ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್.

ಪೊಲೀಸರ ದಾಳಿ. ಮನೆಯೊಳಗೆ ಅಂದರ್ ಬಾಹರ್ ಆಡುತ್ತಿದ್ದವರು ಅಂದರ್.

ಶ್ರೀನಿವಾಸ್ ನಾಯ್ಕ ಮೇಲೆ ಹಲ್ಲೆ ಮಾಡಿಲ್ಲ. ಇದೆಲ್ಲ  ಸುಳ್ಳು ನಾಟಕ. ಎಸ್ಪಿ ನಾರಾಯಣ್ ಹೇಳಿಕೆ.