ಮೈಸೂರು :  ಒಂದೇ ಕುಟುಂಬದ ನಾಲ್ವರು ಅಡುಗೆ ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಧರುಣ ಘಟನೆ
ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.

ಮೃತರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನವರು. ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನ್ನಪ್ಪಿದವರು.
ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತರಾಗಿದ್ದಾರೆ.

ಕುಟುಂಬಸ್ಥರೆಲ್ಲರೂ ಭಾನುವಾರ ಮದುವೆಗೆ ತೆರಳಿ  ಸೋಮವಾರ ವಾಪಸ್ ಬಂದಿದ್ದರು. ಇಂದು ಬೆಳಿಗ್ಗೆ ಮನೆಯಿಂದ ಯಾರು ಹೊರಗೆ ಬಾರದಿದ್ದಾಗ ಸ್ಥಳೀಯರು ಬಾಗಿಲು ತೆಗೆದು ನೋಡಿದಾಗ ಗೊತ್ತಾಗಿದೆ.

ಕುಮಾರಸ್ವಾಮಿ ಕುಟುಂಬ 30 ವರ್ಷಗಳಿಂದ ಎರಗನಹಳ್ಳಿ ಗ್ರಾಮದಲ್ಲಿ ನೆಲೆಸಿದ್ದಾರೆ. ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಬಟ್ಟೆ ಇಸ್ರ್ತಿ ಪೆಟ್ಟಿಗೆಗೆ ಗ್ಯಾಸ್ ಬಳಸುತ್ತಿದ್ದರು. ಇದರಿಂದಲೇ ಅನಿಲ ಸೋರಿಕೆಯಾಗಿ ಘಟನೆ‌ ನಡೆದಿದೆ.