ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಬೆಂಗಳೂರು (Bengaluru) : ಮಂಗನ ಕಾಯಿಲೆಗೆ ತುತ್ತಾದ ರೋಗಿಗಳ ಕುಟುಂಬ ಎಪಿಎಲ್ ಆಗಿದ್ದರೂ ಅವರಿಗೂ ಕೂಡ ಉಚಿತ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಷಯ ಹಂಚಿಕೊಂಡಿರುವ ಅವರು, ರಾಜ್ಯದಲ್ಲಿ ಕೆಎಫ್ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯದ ಮಲೆನಾಡು ಭಾಗಗಳಲ್ಲಿ ಹಲವು ವರ್ಷಗಳಿಂದ ಮಂಗನ ಕಾಯಿಲೆ (ಕೆಎಫ್ಡಿ) ಕಾಡುತ್ತಿದೆ. ಕಾಯಿಲೆ ನಿಯಂತ್ರಣಕ್ಕೆ ನಮ್ಮ ಸರಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ಈಗಾಗಲೇ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದೆ. ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್ಡಿ ಲಸಿಕೆ ಸಿಗಲಿದೆ ಎಂದು ಮಾಹಿತಿ ನೀಡಿದ ಅವರು ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ : ಡಾಬಾ ಬಂದಾಗ ಸತ್ತು ಬದುಕಿದ್ದ ವ್ಯಕ್ತಿ ಇದೀಗ ವಿಧಿವಶ
ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಕೊ. ಕ್ಷುಲ್ಲಕ ಕಾರಣಕ್ಕಾಗಿ ಕೃತ್ಯ.
ಉಳವಿ ಯಾತ್ರಾರ್ಥಿ ತಂಡದ ಗಲಾಟೆ. ಒಂದು ತಂಡದಿಂದ ಇನ್ನೊಂದು ತಂಡದ ಮೇಲೆ ಹಲ್ಲೆ. ಪರಾರಿ.