ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news)ಬೆಂಗಳೂರು (Bangaluru): ಪಹಲ್ಲಾಮ್ ಟೆರರ್ ಅಟ್ಯಾಕ್ ಗೆ ಪ್ರತೀಕಾರವಾಗಿ ಭಾರತೀಯ ಸೇನೆ(Indian Army) ‘ಆಪರೇಷನ್ ಸಿಂದೂರ’ (Operation Sindhur) ಮೂಲಕ ಪಾಠ ಕಲಿಸಿದೆ.
ಸೈನಿಕರ ಕಾರ್ಯಾಚರಣೆಯ ಬೆನ್ನಲ್ಲೇ ರಾಜ್ಯ ಸರ್ಕಾರ(State Government) ಸಹ ತುರ್ತು ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿರುವ ಎಲ್ಲಾ ಅಣೆಕಟ್ಟುಗಳಿಗೆ ಬಿಗಿ ಭದ್ರತೆ ನೀಡುವಂತೆ ಜಲಸಂಪನ್ಮೂಲ ಇಲಾಖೆ ಅದೇಶಿಸಿದೆ. ಇಲಾಖೆ ಕಾರ್ಯದರ್ಶಿ ಸತ್ಯಮೂರ್ತಿ ಕುಲಕರ್ಣಿ ಆದೇಶ ಹೊರಡಿಸಿದ್ದಾರೆ.
ಆಯಾ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ನೀಡುವಂತೆ ತಿಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳನ್ನ ನೇಮಕ ಮಾಡಲಾಗುತ್ತಿದೆ. ಭದ್ರತೆಯಲ್ಲಿ ದೋಷ ಕಂಡುಬಂದರೆ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಚ್ಚರಿಸಲಾಗಿದೆ. ರಾಜ್ಯದ 17 ಅಣೆಕಟ್ಟುಗಳ ಮುಖ್ಯ ಎಂಜಿನಿಯರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿ ಅದೇಶಿಸಲಾಗಿದೆ.
ಇದನ್ನು ಓದಿ : ಕಾರವಾರದಲ್ಲಿ ಸ್ವಯಂ ಪ್ರೇರಿತ ಬಂದ್. ಹಿಂದೂ ಕಾರ್ಯಕರ್ತರ ಬೃಹತ್ ಪ್ರತಿಭಟನೆ.
ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಉಗ್ರ ಮಸೂದ್ ಅಜರ್ ಕುಟುಂಬ ನಿರ್ನಾಮ.
ಪಾಕ್ ಭಯೋತ್ಪಾದಕ ನೆಲೆ ಮೇಲೆ ವಾಯು ಸೇನೆ ಅಟ್ಯಾಕ್. 100ಕ್ಕೂ ಹೆಚ್ಚು ಉಗ್ರರು ಮಟಾಷ್.