ಕಾರವಾರ(Karwar) : ಕಾರವಾರ ತಾಲೂಕಿನ ಬಿಣಗಾ(Binaga) ಗ್ರಾಮದ ಆದಿತ್ಯಾ ಬಿರ್ಲಾ ಗ್ರಾಸೀಂ ಇಂಡಸ್ಟ್ರೀಸ್ ಲಿಮಿಟೆಡ್ (Aditya Birla grasim Industry ltd) ಕ್ಲೋರಿನ್ ಘಟಕದಲ್ಲಿ ಕ್ಲೋರಿನ್ ಅನಿಲ ಸೋರಿಕೆ(Chlorin Leakage) ಪ್ರಕರಣಕ್ಕೆ ಸಂಬಂಧಿಸಿ ಮುಂದೆ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಕ್ರಮ ಮತ್ತು ಸುರಕ್ಷತಾ ಆಡಿಟ್‌ ಮಾಡಿಸಿ ಉತ್ತರ ಕನ್ನಡ ಜಿಲ್ಲಾ ಬಿಕ್ಟಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸುತ್ತಾ ಉತ್ಪಾದನಾ ಕಾರ್ಯವನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ “ನಿಷೇದಾಜ್ಞೆ ಆದೇಶ” ಹೊರಡಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ(DC Lakshmipriya), ಘಟನೆಯಲ್ಲಿ ಒಟ್ಟು 19ಜನ ಅಸ್ವಸ್ಥರಾಗಿದ್ದು, 14 ಜನರಿಗೆ ಕಾರವಾರ ಜಿಲ್ಲಾಸ್ಪತ್ರೆ (KRIMS)ಗೆ ದಾಖಲಿಸಲಾಗಿದೆ ಹಾಗೂ 5 ಜನರನ್ನು ಆದಿತ್ಯಾ ಬಿರ್ಲಾ ಗ್ರಾಸೀಂ ಕಾರ್ಖಾನೆಯ ಒಳಾಂಗಣದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಸ್ವಸ್ತಗೊಂಡಿರುವ ಕಾರ್ಮಿಕರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದು ವೈದ್ಯರ ಸಲಹೆ ಮೇರೆಗೆ ಅವರನ್ನು 24 ಗಂಟೆಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ.

ಘಟನೆ ನಡೆದ ದಿನವೇ ಸುಮಾರು ಸಾಯಂಕಾಲ 8.40 ಗಂಟೆಗೆ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ಮತ್ತು ತನಿಖೆ ಮಾಡಿ ಕ್ರಮ ತೆಗೆದುಕೊಂಡಿರುತ್ತಾರೆ.

ಕಾರ್ಖಾನೆಯಲ್ಲಿನ ಸುರಕ್ಷತೆಯ ಕುರಿತು ಕ್ರಮ ತೆಗೆದುಕೊಳ್ಳಲು ಮತ್ತು ಮುಂದಿನ ದಿನಗಳಲ್ಲಿ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಮತ್ತು ಸುರಕ್ಷತಾ ಕ್ರಮದ ಆಡಿಟ್‌ ಮಾಡಿಸಿ ಉತ್ತರ ಕನ್ನಡ ಜಿಲ್ಲಾ ಬಿಕ್ಟಟ್ಟು ಪರಿಹಾರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸುತ್ತಾ ಉತ್ಪಾದನಾ ಕಾರ್ಯವನ್ನು ಸ್ಥಗಿತಗೊಳಿಸಲು “ನಿಷೇದಾಜ್ಞೆ ಆದೇಶ” ಹೊರಡಿಸಲಾಗಿದೆ.

ಕಾರ್ಮಿಕ ಸಚಿವರಾದ(Labour Minister) ಸಂತೋಷ ಲಾಡ್‌ರವರು (Santosh Lad) ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶಿಸಿದ್ದಾರೆ.

ಜಿಲ್ಲಾಡಳಿತವು ಬಾದಿತ ಕಾರ್ಮಿಕರ ಆರೋಗ್ಯ ಮತ್ತು ಕಾರ್ಖಾನೆಯಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ : ಧಾರ್ಮಿಕ ಕಾರ್ಯ ಮುಗಿಸಿ ತೆರಳುತ್ತಿದ್ದ ಕುಟುಂಬದ  ಕಾರು ಪಲ್ಟಿ : ದಂಪತಿ ದುರ್ಮರಣ.

ಡೊಂಕನಾಳ ಬಳಿ ಅಪಘಾತ. ಇಬ್ಬರ ಧಾರುಣ ಸಾವು

ಕಾರ್ಮಿಕ ಸುರಕ್ಷತೆ ಕಾಪಾಡುವಲ್ಲಿ ಬಿಲ್ಟ್ ಕಂಪನಿ ವಿಫಲ : ದಿಲೀಪ್ ಅರ್ಗೇಕರ್ ಆಕ್ರೋಶ

ಬಿಗ್ ಬಾಸ್ ವೀಕ್ಷಕರಿಗೆ ಶಾಕ್. ಫೈರ್‌ಬ್ರಾಂಡ್ ಚೈತ್ರಾ ಕುಂದಾಪುರ ಔಟ್.

ಗ್ರಾಮಸ್ಥರ ಪ್ರತಿಭಟನೆಗೆ ಬೆಂಡಾದ ಗ್ರಾಸಿಮ್ ಕಂಪನಿ ಅಧಿಕಾರಿಗಳು. ಕಾರ್ಖಾನೆ ತಾತ್ಕಾಲಿಕ ಬಂದ್.