ಭಟ್ಕಳ(Bhatkal): ಬಾಂಗ್ಲಾ ದೇಶದಲ್ಲಿ (Bangla Desha) ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಭಟ್ಕಳ ನಗರದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಯಿತು.

ವಿಶ್ವ ಹಿಂದೂ ಪರಿಷತ್‌ (Vishwa Hindu Parishat) ಮತ್ತು ಹಿಂದೂ ಜಾಗರಣ ವೇದಿಕೆ, ಭಟ್ಕಳದ ಸಮಸ್ತ ಹಿಂದೂ ಸಂಘಟನೆಗಳ ಸಹಭಾಗಿತ್ವದಲ್ಲಿ  ಹಿಂದೂಗಳ ವಿರಾಟ್ ದರ್ಶನ ಕಂಡು ಬಂತು.

ಸಾವಿರಾರು ಸಂಖ್ಯೆಯಲ್ಲಿ ಹಿಂದೂ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಒಗ್ಗಟ್ಟು ಪ್ರದರ್ಶಿಸಿದರು. ವ್ಯಾಪಾರಸ್ಥರು, ಆಟೋ ಚಾಲಕರು, ಕಾರ್ಮಿಕರು, ಹೋಟೆಲ್ ಉದ್ಯಮಿಗಳು, ಮೀನುಗಾರರು ಸೇರಿದಂತೆ ಪ್ರತಿಯೊಂದು ವರ್ಗ, ಸಮಾಜದ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಮೆರವಣಿಗೆಯಲ್ಲಿ ಪಾಲ್ಗೊಂಡವರಿಗಾಗಿ ಜಿಎಸ್‌ಬಿ ಸಮಾಜದಿಂದ ತಂಪು ಪಾನೀಯದ ವ್ಯವಸ್ಥೆ ಮಾಡಲಾಗಿತ್ತು. ಕೇಸರಿ ಶಾಲು ಹಾಕಿಕೊಂಡ ಕಾರ್ಯಕರ್ತರು ಭಗವಾಧ್ವಜ ಹಿಡಿದುಕೊಂಡು ಮೆರವಣಿಗೆಯಲ್ಲಿ ಹೊರಟಾಗ ಕೇಸರಿ ಪಡೆಯ ಮಹಾಸಾಗರ ಹರಿದು ಬಂದಂತಿತ್ತು.

ಚನ್ನಪಟ್ಟಣ ಹನುಮಂತ ದೇವಸ್ಥಾನದಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಸಂಶುದ್ದೀನ್ ವೃತ್ತದ ಮೂಲಕ ರಿಕ್ಷಾ ಚಾಲಕರ ಸಂಘದ ಗಣೇಶೋತ್ಸವ ಮೈದಾನಕ್ಕೆ ಬಂದು ತಲುಪಿತು.

ಗಣೇಶೋತ್ಸವ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಂಗಳೂರಿನ  ಗುರುಪುರದ  ವಜ್ರದೇಹಿ ಸಂಸ್ಥಾನದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಸಮುದ್ರವೇ ಹರಿದು ಬಂದ ಹಾಗೆ ಭಟ್ಕಳ ಹಿಂದು ಸಮಾಜ ಒಂದಾಗಿ ಬಂದಿರುವದನ್ನು ನೋಡಿದರೆ, ಇದೊಂದು ಸ್ಪಷ್ಟ ಸಂದೇಶ ಬಾಂಗ್ಲಾ ದೇಶಕ್ಕೆ ತಲುಪಲಿದೆ ಎಂದು ನುಡಿದರು. ಹಸೀನಾ ಬೇಗಮ್ ಭಾರತಕ್ಕೆ ಬಂದ ಕೂಡಲೆ ಯೂನುಸ್ ಎನ್ನುವ ಅಸಮರ್ಥ ನಾಯಕ ಬಾಂಗ್ಲಾ ದೇಶದ ಚುಕ್ಕಾಣಿ ಹಿಡಿದ. ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದುಗಳನ್ನು ರಕ್ಷಿಸುವ ಕಾರ್ಯ ಮಾಡಬೇಕಿದ್ದ ಆತ ಕೋಮು ದ್ವೇಷಕ್ಕೆ ಪ್ರಚೋದನೆ ನೀಡಿ ನರಮೇಧಕ್ಕೆ ಚಾಲನೆ ನೀಡಿದ್ದಾನೆ . ಜಗತ್ತಿನಾದ್ಯಂತ ಶಾಂತಿ ಮಂತ್ರವನ್ನು ಪಠಿಸುವ ಇಸ್ಕಾನ್ ಸಂಸ್ಥೆ ಬಾಂಗ್ಲಾದಲ್ಲೂ ಕಾರ್ಯ ನಡೆಸುತ್ತಿದೆ. ಜಾತಿ, ಮತ, ಪಂಥ ಬೇದವನ್ನು ಮರೆತು ಎಲ್ಲರಿಗೂ ಅನ್ನ ನೀಡಿದ ಸಂಸ್ಥೆಯ ಚಿನ್ಮಯಿ ಕೃಷ್ಣದಾಸನನ್ನು ಬಂಧಿಸಿದ್ದಾರೆ. ಬಾಂಗ್ಲಾದಲ್ಲಿ ಹಿಂದು ಹೆಣ್ಣು ಮಕ್ಕಳ ಅತ್ಯಾಚಾರ ದೌರ್ಜನ್ಯ ಮೀತಿ ಮೀರುತ್ತಿದೆ. ಕೋಮು ಪ್ರಚೋದನೆ ನೀಡಿ ಅಫೀಮಿನಂತೆ ದೌರ್ಜನ್ಯ ಎಸಗುವ ನಿಮಗೆ ಸದ್ಯದಲ್ಲೇ ಒಂದು ಗತಿ ಕಾದಿದೆ ಎಂದು ಎಚ್ಚರಿಸಿದರು.

ಭಟ್ಕಳದಲ್ಲೂ ಹಿಂದುಗಳು ಎಚ್ಚರಿಕೆಯಿಂದು ಇರಬೇಕು. ಸಂಘಟನೆ, ಸಂಪತ್ತು ಸಂತಾನವನ್ನು ಕಾಯ್ದುಕೊಳ್ಳಿ. ನಮ್ಮ ಮಕ್ಕಳಿಗೆ ಸಂಸ್ಕಾರ ಕೊಡುವಂತ ಅತಿ ಮುಖ್ಯವಾದ ಸನ್ನಿವೇಶ ಇಂದು ನಿರ್ಮಾಣವಾಗಿದೆ. ಹಿಂದು ಸಮಾಜ ಸಂಘಟಿತವಾಗಿ, ಸದೃಢವಾಗಿದ್ದರೆ ಯಾರಿಗೂ ತೊಂದರೆ ಇಲ್ಲ. ನಾವು ಯಾರಿಗೂ ಕಿರುಕುಳ ಕೊಡುವ ಮನಸ್ಥಿತಿ ಹೊಂದಿಲ್ಲ. ಶಾಂತಿ ಮಂತ್ರವನ್ನು ನಾವು ಪಠಿಸಿದರೆ ಸಾಲದು. ಇನ್ನೊಂದು ಸಮಾಜವು ಅದಕ್ಕೆ ಕೈ ಜೋಡಿಸಬೇಕು. ಇಲ್ಲಿ ನಮ್ಮ ನೆಲೆಯೇ ಭದ್ರವಿಲ್ಲ. ಆದರೆ ಭಾರತದಲ್ಲಿ ಸಮಗ್ರ ಪ್ರಧಾನಿ ಇರುವದರಿಂದ ನಮಗೆ ಭಯವಿಲ್ಲ ಎಂದು ಅವರು ಹೇಳಿದರು.

ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತದ ಪ್ರಮುಖ ಕಾರ್ಕಳದ ಶ್ರೀಕಾಂತ ಶೆಟ್ಟಿ ಮಾತನಾಡಿ, ಕೇಸರಿ ಹಾರಾಡುತ್ತಿರುವದು ಗಾಳಿಯಿಂದ ಅಂತ ತಿಳಿದುಕೊಂಡರೆ ಅದು ನಮ್ಮ ತಪ್ಪು ಕಲ್ಪನೆ. ಸಹಸ್ರಾರು ಹಿಂದೂ ಕಾರ್ಯಕರ್ತರು ಬಲಿದಾನದ ಸಂದರ್ಭದಲ್ಲಿ ಅವರು ಚೆಲ್ಲಿದ ನೆತ್ತರಿನಿಂದ ಇದು ಹಾರಾಡುತ್ತಿದೆ. ಬಾಂಗ್ಲಾ ದೇಶವನ್ನು ಒಂದು ಸಮಯದಲ್ಲಿ ಕನ್ನಡಿಗರು ಆಳ್ವಿಕೆ ಮಾಡಿದ್ದಾರೆ. ಇಂದು ಕೂಡ ಕನ್ನಡಿಗರಾದ ನಾವು ಒಗ್ಗಟ್ಟಾಗಿ ಬಾಂಗ್ಲಾ ದೇಶಕ್ಕೆ ಸಂದೇಶ ರವಾನಿಸಬೇಕಿದೆ ಎಂದು ಅವರು ಹೇಳಿದರು.

ಇದಕ್ಕೂ ಪೂರ್ವದಲ್ಲಿ  ಹಿಂದೂ ಮುಖಂಡ ಗೋವಿಂದ ಖಾರ್ವಿ, ವಿಶ್ವ ಹಿಂದೂ ಪರಿಷತ್‌ ಭಟ್ಕಳದ ಅಧ್ಯಕ್ಷ ರಾಮಕೃಷ್ಣ ನಾಯ್ಕ ಕಾರ್ಯಕ್ರಮದ ಸಹಸಂಚಾಲಕ ಜಯಂತ ಬೆಣಂದೂರು, ನಾಗೇಶ ನಾಯ್ಕ ಹೆಬಳೆ ಮಾತನಾಡಿದರು. ದಿವ್ಯಾ ದಿನೇಶ ನಾಯ್ಕ ಉಮೇಶ ಮುಂಡಳ್ಳಿ, ಪ್ರಾರ್ಥಿಸಿದರೆ ಶಿಕ್ಷಕ ನಾರಾಯಣ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಮಾಜಿ ಸಚಿವ ಶಿವಾನಂದ ನಾಯ್ಕ ಮಾಜಿ ಶಾಸಕ ಸುನೀಲ ನಾಯ್ಕ 31 ಸಮಾಜದ ಮುಖಂಡರು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡಿದ್ದರು.

ಇದನ್ನು ಓದಿ : ಕುಡ್ಲೆ ಬೀಚಿನಲ್ಲಿ ಇನ್ನಿಬ್ಬರು ಪ್ರವಾಸಿಗರ ರಕ್ಷಣೆ.

ಗೋವಾದಲ್ಲಿ ಇನ್ಮುಂದೆ ಬಾಡಿಗೆ ಮನೆ ಪಡೆಯೋದು ಸುಲಭವಿಲ್ಲ.

ಪುಷ್ಪ ಚಿತ್ರದ ನಟ ಅಲ್ಲು ಅರ್ಜುನ್ ಆರೆಸ್ಟ್

ಮಾಜಿ ಬಿಗ್ ಬಾಸ್ ​ ಸ್ಪರ್ಧಿ ಡ್ರೋನ್​ ಪ್ರತಾಪ್​ ಬಂಧನ.