ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ (Karwar) : ಭಾರತೀಯ ಹವಮಾನ ಇಲಾಖೆ ಉತ್ತರಕನ್ನಡ ಜಿಲ್ಲೆಯಲ್ಲಿ ಜೂನ್ 27 ವರೆಗೆ ಆರೆಂಜ್ ಅಲರ್ಟ್ ಸೂಚನೆ ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯ ಕೆಲ ತಾಲ್ಲೂಕುಗಳ ಮಳೆಯಾಗಬಹುದು. ಹೀಗಾಗಿ ಜೋಯಿಡಾ ಮತ್ತು ದಾಂಡೇಲಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ 26ರಂದು ರಜೆ (Holiday) ಘೋಷಿಸಲಾಗಿದೆ.
ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜೋಯಿಡಾ(Joida) ಮತ್ತು ದಾಂಡೇಲಿ(Dandeli) ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಿಗೆ ರಜೆ ನೀಡಲಾಗಿದೆ. ಅನಾನುಕೂಲ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲಿನ ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ (Holiday Declared) ಆದೇಶ ಮಾಡಲಾಗಿದೆ.
ಆದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ, ಶಿರಸಿ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರವರು ಕಾರ್ಯ ರೂಪಕ್ಕೆ ತರುವಂತೆ ತಿಳಿಸಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಬಸ್ ಪಲ್ಟಿ. ಪ್ರಪಾತದ ದುರಂತದಿಂದ ಸ್ವಲ್ಪದರಲ್ಲಿ ಪಾರಾದ ಪ್ರಯಾಣಿಕರು.
ಭಟ್ಕಳದಲ್ಲಿ ಮನೆ ದೋಚಿದ ಕಳ್ಳರು. ಅಪಾರ ಪ್ರಮಾಣದ ಆಭರಣಗಳ ಕಳ್ಳತನ
ಶಾಲಾ ವಿದ್ಯಾರ್ಥಿ ಅಪಘಾತದಲ್ಲಿ ದುರ್ಮರಣ. ಬಿಕ್ಕಿಬಿಕ್ಕಿ ಅತ್ತ ಶಿಕ್ಷಕರು.
	
						
							
			
			
			
			
