ಹೊನ್ನಾವರ : ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  ಪ್ರಯಾಣಿಕರೊಬ್ಬರಿಗೆ ಹೃದಯಘಾತವಾದ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಹಡಿನಬಾಳ ಗ್ರಾಮದ ಕೃಷ್ಣ ಶೆಟ್ಟಿ ಬಸ್ನಲ್ಲಿ  ಹೃದಯಘಾತದಿಂದ ಸಾವನ್ನಪ್ಪಿದ ದುರ್ದೈವಿ.   ಕೃಷ್ಣ ಶೆಟ್ಟಿ ಅವರು ಬೆಳಿಗ್ಗೆ ಹೊನ್ನಾವರ ಮಾರುಕಟ್ಟೆಗೆ ಬಂದು ವ್ಯಾಪಾರ ಮುಗಿಸಿ ಮೀನು ಖರೀದಿಸಿ ಮನೆಗೆ ತೆರಳುತ್ತಿದ್ದರು. ಹೊನ್ನಾವರದಿಂದ ಗೇರುಸೊಪ್ಪ ಕಡೆಗೆ ತೆರಳುತ್ತಿದ್ದ ಬಸ್ಗೆ ಹೋಗುತ್ತಿದ್ದರು.

ಬಸ್ ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತ ಅವರಿಗೆ ಹೃದಯಘಾತ ಉಂಟಾಗಿದೆ. ಪ್ರಯಾಣಿಕರು ಗಮನಿಸಿ ಚಾಲಕನಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಚಾಲಕ ಮೋಹನ ನಾಯ್ಕ ಬಸ್ ತಿರುಗಿಸಿ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿದೆ. ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.