ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news)ನವದೆಹಲಿ (Newdelhi): ಭಾರತದ ಮೇಲೆ ಪಾಕಿಸ್ತಾನ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ (Indian Army) ತಕ್ಕ ಉತ್ತರ ನೀಡುತ್ತಿದೆ. ಆದರೆ ಪಾಕಿಸ್ತಾನ(Pakistan) ಸುಖಾ ಸುಮ್ಮನೆ ಸುಳ್ಳು ಸುದ್ದಿ ಹರಡುತ್ತಿದೆ ಎಂದು ರಕ್ಷಣಾ ಸಚಿವಾಲಯದಿಂದ(Defence Ministry) ಮಾಹಿತಿ ನೀಡಲಾಗಿದೆ.
ಕಾಲು ಕೆರೆದು ಭಾರತದೊಳಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಭಾರತಕ್ಕೆ ಕೊನೆಯ ಎಚ್ಚರಿಕೆ ನೀಡಲಾಗಿದೆ. ಇನ್ಮುಂದೆ ಭಾರತದ ಮೇಲೆ ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದಕ ದಾಳಿಗಳನ್ನು(Terror Attack) ಯುದ್ಧ ಕೃತ್ಯಗಳೆಂದು ಪರಿಗಣಿಸಲಾಗುವುದು ಎಂದು ಭಾರತ ಸರ್ಕಾರ(India Government) ಘೋಷಿಸಿದೆ.
ಮುಂದೆ ನಡೆಯುವ ಯಾವುದೇ ಉಗ್ರ ಕೃತ್ಯವನ್ನು ದೇಶದ ವಿರುದ್ಧದ ಯುದ್ಧ ಕೃತ್ಯವೆಂದು ಪರಿಗಣಿಸಲಾಗುವುದು ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯೆ ನೀಡುತ್ತೇವೆ ಎಂದು ಭಾರತ(India) ನಿರ್ಧರಿಸಿದೆ ಎಂಬುದು ಗೊತ್ತಾಗಿದೆ.
ಈ ನಡುವೆ ಸುದೀರ್ಘ ಮಾತುಕತೆಯ ಬಳಿಕ ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಟ್ವಿಟ್ ಮಾಡಿದ್ದಾರೆ.
“ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳುವಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಶೆಹಬಾಜ್ ಷರೀಫ್(Shehabaj Shareef) ಅವರ ಬುದ್ಧಿವಂತಿಕೆ, ವಿವೇಕ ಮತ್ತು ರಾಜತಾಂತ್ರಿಕತೆಯನ್ನು ನಾವು ಶ್ಲಾಘಿಸುತ್ತೇವೆ,” ಎಂದು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಟ್ವಿಟ್ ಮಾಡಿದ್ದಾರೆ.
ಇದನ್ನು ಓದಿ : ಕಾರವಾರ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ