ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)(Udupi) : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ(journey Death) ಘಟನೆ ಬುಧವಾರ ನಡೆದಿದೆ.
ಮುಂಬೈಯಿಂದ ಎರ್ನಾಕುಲಂಗೆ (Mumbai to Ernakulam) ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಮಹಿಳೆ ಮಗನೊಂದಿಗೆ ಪ್ರಯಾಣಿಸುತ್ತಿದ್ದಾಗ ಏಕಾ ಏಕಿಯಾಗಿ ಮಾರ್ಗ ಮಧ್ಯದಲ್ಲಿ ಅಸ್ವಸ್ಥಗೊಂಡರು. ರೈಲ್ವೆ ಸಿಬ್ಬಂದಿಗಳ ಗಮನಕ್ಕೆ ತಂದಾಗ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು, ಆರೋಗ್ಯ ಸ್ಥಿತಿಯನ್ನು ಅರಿತು ಕೃತಕ ಉಸಿರಾಟದ ವ್ಯವಸ್ಥೆಗೊಳಿಸಿದ್ದರು.
ಬಳಿಕ ರೈಲ್ವೇ ವೈದ್ಯಾಧಿಕಾರಿ ಡಾ. ಸ್ಟಿವನ್ ಜಾರ್ಜ್ ಅವರು ಉಡುಪಿಯ (Udupi) ಇಂದ್ರಾಳಿ ರೈಲು ನಿಲ್ದಾಣದಲ್ಲಿ(Indrali Railway Station) ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸಮಾಜ ಸೇವಕ ನಿತ್ಯಾನಂದ ಸಹಕಾರದೊಂದಿಗೆ ಮಣಿಪಾಲ ಆಸ್ಪತ್ರೆಗೆ (Manipal Hospital) ಸಾಗಿಸುವ ವ್ಯವಸ್ಥೆಗೊಳಿಸಿದರು. ಪರೀಕ್ಷಿಸಿದ ವೈದ್ಯರು ಮಹಿಳೆ ಅದಾಗಲೇ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಇದನ್ನು ಓದಿ : ಹೊಸ ವರ್ಷಕ್ಕೆ ಅರ್ಧ ದಿನವೇ ಗುರಿ ದಾಟಿ ಈ ಬಾರೀ 308 ಕೋಟಿ ರೂ. ಮದ್ಯ ಮಾರಾಟ.