ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ತಿರುಪತಿ (Tirupati) : ಕರ್ನಾಟಕದಿಂದ ತಿರುಪತಿ(Karnataka to Tirupati) ತಿಮ್ಮಪ್ಪನ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ(Ramalingareddi) ಶುಭ ಸುದ್ದಿ ನೀಡಿದ್ದಾರೆ.
ಕರ್ನಾಟಕ ರಾಜ್ಯ ಛತ್ರ, ತಿರುಮಲದಲ್ಲಿ ನೂತನವಾಗಿ ನಿರ್ಮಿಸಿರುವ ಐಹೊಳೆ 132 ಕೊಠಡಿಗಳ ಬ್ಲಾಕ್ನ ಉದ್ಘಾಟನೆ ಮಾಡಲಾಗಿದೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವು (Karnataka State Government) ತಿರುಮಲಕ್ಕೆ ಶ್ರೀವೆಂಕಟೇಶ್ವರ ಸ್ವಾಮಿಯ (Tirumala Venkateshwar Swami) ದರುಶನಕ್ಕಾಗಿ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ರೂ.200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ 110 AC ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350 (+GST) ನಿಗದಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.
ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಅಂತಿಮ ಕೆಲಸ ಕಾರ್ಯಗಳನ್ನು
ತಿರುಪತಿ(Tirupati) ಹಾಗೂ ತಿರೂಚಾನೂರಿನಲ್ಲಿ(Tiruchanuru) ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.
ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸುತ್ತಿದೆ.
ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ಸಿಎಂ(Karnataka Cm) ಹಾಗೂ ಆಂಧ್ರ ಸಿಎಂ(Andra Cm) ಸಮ್ಮುಖದಲ್ಲಿ ನೆರವೇರಲಿದೆ ಎಂದು ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್ ಸೈಟ್ Karnatakatemplesaccommodation.com ಮೂಲಕ ಶೇ.60% ರಷ್ಟು ಆನ್ ಲೈನ್ ಮೂಲಕ ಹಾಗೂ ಶೇ.40% ಆಪ್ ಲೈನ್ ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಲಾಗಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಇದನ್ನು ಓದಿ : ರೇನಾಲ್ಟ್ ಶೋ ರೂಮ್ ಗೆ ಬೆಂಕಿ. ಕೋಟ್ಯಂತರ ರೂ ಮೌಲ್ಯದ ಕಾರುಗಳು ಅಗ್ನಿಗಾಹುತಿ
ಹಸುವಿನ ಹತ್ಯೆ ಪ್ರಕರಣ. ಐವರು ವಶಕ್ಕೆ. ಕೃತ್ಯದಲ್ಲಿ ತೊಡಗಿದವರ ಗಡಿಪಾರಿಗೆ ಕ್ರಮ
ಗೋ ಹಂತಕರ ಮೇಲೆ ಪೊಲೀಸರು ಗುಂಡಿನ ಮೊರೆತ ಮೊಳಗಿಸಲಿ : ನಾಗರಾಜ ನಾಯಕ್ ಗುಡುಗು.
ಮಾಡೆಲ್ ಕಮ್ ಕಂಟೆಂಟ್ ಕ್ರಿಯೇಟರ್ ಆಗಿ ಬದಲಾದ ಮೊನಾಲಿಸಾ.
ರಾಜ್ಯದಲ್ಲಿ ಮದ್ಯ ಮತ್ತೆ ದುಬಾರಿ. ಮದ್ಯ ಪ್ರಿಯರಿಗೆ ಶಾಕ್
ಅಂದು ಕರ್ನಾಟಕದಲ್ಲಿಯೇ ಐಎಎಸ್ ಅಧಿಕಾರಿಯಾಗಿ ಸೇವೆ. ಇಂದು ನಾಗಾ ಸಾಧು !
ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ. ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ