ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ(Karwar): ಮಾಜಿ ನಗರಸಭಾ ಸದಸ್ಯ ಸತೀಶ್ ಕೋಳಂಕರ್ ಹತ್ಯೆ ಪ್ರಕರಣದಲ್ಲಿ ನಿರ್ಲಕ್ಷ ವಹಿಸಿದ್ದಾರೆ ಎಂದು ಪೊಲೀಸ್ ಇಲಾಖೆಯ(Police Department) ನಾಲ್ವರನ್ನ ಅಮಾನತ್ (Suspend) ಮಾಡಿದ ಬಗ್ಗೆ ವರದಿಯಾಗಿದೆ.
ಕಾರವಾರ ನಗರಠಾಣೆಯ(Karwar Town Station) ಪಿಎಸ್ಐ, ಓರ್ವ ಮಹಿಳಾ ಎಎಸ್ಐ, ಎಸ್ ಪಿಸಿ, ಹಾಗೂ ಮತ್ತೋರ್ವ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಮಾನತು ಮಾಡಲು ಆದೇಶಿಸಿದ್ದಾರೆ ಎನ್ನಲಾಗಿದೆ.
ಕಳೆದ ಭಾನುವಾರ ಬೆಳಿಗ್ಗೆ ನಗರಸಭಾ ಮಾಜಿ ಸದಸ್ಯರಾಗಿದ್ದ ಸತೀಶ್ ಕೋಳಂಕರ್ ರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು. ನಿತೇಶ್ ತಾಂಡೇಲ ಎಂಬಾತ ಹಣಕಾಸಿನ ವಿಚಾರದಲ್ಲಿ ಕೊಲೆ ಮಾಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಕಳೆದ ಏಪ್ರಿಲ್ 6 ರಂದು ಇದೇ ವಿಚಾರದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ನಿತೇಶ್ ಹಾಗೂ ಸತೀಶ್ ಕೋಳಂಬಕರ್ ನಡುವೆ ಗಲಾಟೆಯಾಗಿತ್ತು. ಗಲಾಟೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಹೋಟೆಲ್ ನಲ್ಲಿ ನಡೆದ ಗಲಾಟೆಯ ಮಾಹಿತಿಯನ್ನು ಪೊಲೀಸರು ಪಡೆಯದೇ ನಿರ್ಲಕ್ಷತನ ಮಾಡಿದ್ದಾರೆ. ಅಲ್ಲದೇ ಈ ಹಿಂದೆ ಇದೇ ಹಣಕಾಸಿನ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಪ್ರಕರಣ ಸರಿಯಾಗಿ ನಿಭಾಯಿಸಿಲ್ಲ ಎನ್ನುವ ಕಾರಣ ನೀಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಾರಾಯಣ್ ಅಮಾನತು ಮಾಡಿದ್ದಾರೆಂದು ತಿಳಿದುಬಂದಿದೆ..
ಏಪ್ರಿಲ್ 6 ರಂದು ನಡೆದ ಗಲಾಟೆಯ ಮಾಹಿತಿ ಪೊಲೀಸರು ಮುಂಚೆಯೇ ಪಡೆದು ದೂರು ದಾಖಲಿಸಿಕೊಂಡಿದ್ದರೆ ಕೊಲೆಯ ಹಂತಕ್ಕೆ ಪ್ರಕರಣ ಹೋಗುತ್ತಿರಲಿಲ್ಲ, ಎನ್ನುವ ಕಾರಣ ನೀಡಿ ಅಮಾನತು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : ರಸ್ತೆಯಲ್ಲಿ ಬಿದ್ದ 20 ಲಕ್ಷ ರೂ. ಬಂಗಾರ ಮರಳಿಸಿ ಮಾನವೀಯತೆ.