ಕಾರವಾರ : ನೂತನ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. (LAKSHMIPRIYA K.) ಅವರು ಆದೇಶ ಮಾಡಿದ ಕೆಲ ಗಂಟೆಗಳಲ್ಲಿ ಉತ್ತರಕನ್ನಡ (UTTARKANNADA)ಜಿಲ್ಲೆಗೆ ಆಗಮಿಸಿ ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.
ಕಾರವಾರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ತಮ್ಮ ಮೊದಲ ಕಡತಕ್ಕೆ ಸಹಿ ಮಾಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣವನ್ನು ಗಮನಿಸಿದ ಅವರು ಕೆಲ ಸಿಬ್ಬಂದಿಗಳ ಪರಿಚಯಿಸಿಕೊಂಡರು. ನೂತನ ಜಿಲ್ಲಾಧಿಕಾರಿಗಳನ್ನು ಅಧೀನ ಅಧಿಕಾರಿ ಹಾಗೂ ಸಿಬ್ಬಂದಿಗಳು ಆತ್ಮೀಯವಾಗಿ ಬರಮಾಡಿಕೊಂಡರು.
ಪ್ರಸ್ತುತ ಜಿಲ್ಲೆಯಲ್ಲಿ ಮಳೆಯ (RAIN) ವಾತಾವರಣವಿದ್ದು, ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲೆಯಲ್ಲಿ ಉಂಟಾಗುತ್ತಿರುವ ಪ್ರವಾಹಕ್ಕೆ (FLUD) ಸಂಬಂಧಿಸಿದಂತೆ ಎಚ್ಚರದಿಂದ ಇರಬೇಕೆಂದು ಸೂಚಿಸಿದರು.