ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಮೈಸೂರು(Mysore) : ಕರ್ನಾಟಕ  ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದ  ಮುಡಾ(MUDA) ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiha) ಮತ್ತು ಅವರ ಪತ್ನಿ ಪಾರ್ವತಿ ಬಚಾವ್ ಆಗಿದ್ದಾರೆ. ಅವರು ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು (Lokayukta Police) ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಪ್ರಕರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್‌(Lokayukta Notice) ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಲೋಕಾಯುಕ್ತರು ಮಾಹಿತಿ ನೀಡಿದ್ದಾರೆ.  ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಗಳು  ಸಾಬೀತಾಗಿಲ್ಲ ಎಂದು ತಿಳಿಸಲಾಗಿದೆ. A1 ಸಿದ್ದರಾಮಯ್ಯ, A2 ಪಾರ್ವತಿ, A3 ಮಲ್ಲಿಕಾರ್ಜುನ ಸ್ವಾಮಿ, A4 ದೇವರಾಜು ವಿರುದ್ಧ ದಾಖಲಾದ ಕೇಸ್‌ನಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ಹೇಳಿದೆ.

ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)
ನಿವೇಶನ ಹಂಚಿಕೆ ವಿಚಾರದಲ್ಲಿ ಸ್ನೇಹಮಯಿ ಕೃಷ್ಣ ಅವರು  ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರಿಂದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿತ್ತು. ಪ್ರಕರಣವು ತನಿಖಾಧಿಕಾರಿಗಳಿಗೆ ಸಿವಿಲ್‌ ಸ್ವರೂಪದ್ದೆಂದು, ತನಿಖೆ ನಡೆಸಲು ತಕ್ಕುದಲ್ಲವೆಂದು, ಸಂಗತಿ ಅಥವಾ ಕಾನೂನಿನ ತಪ್ಪು ತಿಳಿವಳಿಕೆಯೆಂದು, ಕ್ರಮ ಜರುಗಿಸಲು ತಕ್ಕುದಲ್ಲವೆಂದು ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡುಬಂದಿದೆ. ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟಿಸ್‌ ತಲುಪಿದ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದು ಎಂದು ಸ್ನೇಹಮಯಿ ಕೃಷ್ಣ (Snehamayi Krishna) ಅವರಿಗೆ ಲೋಕಾಯುಕ್ತರು ನೀಡಿದ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಆರ್ ಟಿ ಐ (RTI) ಕಾರ್ಯಕರ್ತ  ಸ್ನೇಹಮಯಿ ಕೃಷ್ಣ ಅವರು ಸಿಎಂ ಮತ್ತು ಅವರ ಪತ್ನಿ ವಿರುದ್ಧ ದೂರು ನೀಡಿದ್ದರಿಂದ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಮುಡಾದಿಂದ 2016ರಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿಆರ್‌ಪಿಸಿಯಡಿ ಹೆಚ್ಚುವರಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ತಿಳಿಸಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ (CM Siddaramaiha) ಅವರ ಮೇಲೆ ಬಂದಿರುವ ಗುರುತರ ಆರೋಪದಿಂದ ವಿಪಕ್ಷ ಬಿಜೆಪಿ ಸಹ ಬಾರೀ ಹೋರಾಟ ನಡೆಸಿ ರಾಜೀನಾಮೆಗೆ ಆಗ್ರಹಿಸಿತ್ತು. ಇದೀಗ ಪ್ರಕರಣದಿಂದ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನು ಓದಿ : ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ಲಾರಿ. ಮೂವರ ದುರ್ಮರಣ

ಪ್ರೇಮಿಗಳಿಗೆ ನಿವೇದಿಸಿ ನೇಣಿಗೆ ಕೊರಳೊಡ್ಡಿದ ಯುವಕ. ಅಂಕೋಲಾದಲ್ಲೊಂದು ಹೃದಯವಿದ್ರಾವಕ ಘಟನೆ.

ಭಟ್ಕಳದಲ್ಲಿ ಮೂವರು ಯುವಕರಿಂದ ಓರ್ವನ ಮೇಲೆ ಚಾಕುವಿನಿಂದ ಹಲ್ಲೆ

ಶಿಫಾನಾ ಬೇಗಂ ಕಲ್ಲೂರ್‌ಗೆ ಡಾಕ್ಟರೇಟ್‌ ಪದವಿ ಪ್ರದಾನ