ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಕಾರವಾರ(Karwar): ಭಟ್ಕಳ ಶಹರ ಪೊಲೀಸ್(Bhatkal Town Police) ಠಾಣಾ ವ್ಯಾಪ್ತಿಯಲ್ಲಿ ಏ.5 ರಂದು ಬೆಳಗ್ಗೆ 6 ಗಂಟೆಯಿಂದ ಏ.6 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ(Liquor Ban) ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶ್ರೀ ಚನ್ನಪಟ್ಟಣ ಮಾರುತಿ(Chennapattana Maruti Deva) ದೇವರ ಜಾತ್ರಾ ಮಹೋತ್ಸವವು ಏಪ್ರಿಲ್ 6 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದೆ.
ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಈಕೆ ಕೋಟಿ ಒಡತಿ. ಹೆರಾಯಿನ್ ಸಾಗಾಟದಲ್ಲಿ ಸಿಕ್ಕಿಬಿದ್ದ ಲೇಡಿ ಕಾನ್ಸ್ಟೇಬಲ್.
ದರೋಡೆ ಪ್ರಕರಣದಲ್ಲಿದ್ದ ತಲ್ಲತ್ ಗ್ಯಾಂಗ್ ಆರೆಸ್ಟ್. ಎಸ್ಕೇಪ್ ಆಗುವಾಗ ಪೊಲೀಸರಿಂದ ಪೈರಿಂಗ್.